ಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಬಿಲ್ ಬಿಡುಗಡೆಗೊಳ್ಳಲು ಲಂಚ ಕೇಳಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
15ನೇ ಹಣಕಾಸು ಯೋಜನೆಯಡಿ ನಡೆದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ, ಜೆಇ (ಜೂನಿಯರ್ ಇಂಜಿನಿಯರ್) ಶ್ರೀಪಾದ ಕುಲಕರ್ಣಿ ಅವರು ಬಿಲ್ ಪಾವತಿಗೆ 5% ಲಂಚ ಕೇಳಿದ ದೃಶ್ಯವಿರುವ ವಿಡಿಯೋ ಒಂದು ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ಪಿಡಿಓ (ಗ್ರಾಮ ಪಂಕ್ಮಾಯಿತಿ ಅಭಿವೃದ್ಧಿ ಅಧಿಕಾರಿ) ಮಂಜುಶ್ರೀ ಅವರು 3% ಲಂಚ ಕೇಳುತ್ತಿದ್ದಾರೆಂಬ ಉಲ್ಲೇಖವೂ ಕೂಡಾ ಕಾಣಿಸುತ್ತಿದೆ.
ವಿಡಿಯೋ ಭಾರಿ ವ್ಯಾಪ್ತಿಯಲ್ಲಿ ವೈರಲ್ ಆದ ಬಳಿಕ, ಈ ವಿಷಯಕ್ಕೆ ಗಂಭೀರತೆ ನೀಡಿದ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅವರ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಭವರಸಿಂಗ್ ಮೀನಾ ಅವರು ಇಬ್ಬರನ್ನೂ ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಪಾವತಿಗೆ ಸಂಬಂಧಿಸಿದ ಭ್ರಷ್ಟಾಚಾರದ ತೀವ್ರತೆಯತ್ತ ಬೆಳಕು ಚೆಲ್ಲಿದೆ.
ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…
ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…
ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…
ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ…