ಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಬಿಲ್ ಬಿಡುಗಡೆಗೊಳ್ಳಲು ಲಂಚ ಕೇಳಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
15ನೇ ಹಣಕಾಸು ಯೋಜನೆಯಡಿ ನಡೆದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ, ಜೆಇ (ಜೂನಿಯರ್ ಇಂಜಿನಿಯರ್) ಶ್ರೀಪಾದ ಕುಲಕರ್ಣಿ ಅವರು ಬಿಲ್ ಪಾವತಿಗೆ 5% ಲಂಚ ಕೇಳಿದ ದೃಶ್ಯವಿರುವ ವಿಡಿಯೋ ಒಂದು ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ಪಿಡಿಓ (ಗ್ರಾಮ ಪಂಕ್ಮಾಯಿತಿ ಅಭಿವೃದ್ಧಿ ಅಧಿಕಾರಿ) ಮಂಜುಶ್ರೀ ಅವರು 3% ಲಂಚ ಕೇಳುತ್ತಿದ್ದಾರೆಂಬ ಉಲ್ಲೇಖವೂ ಕೂಡಾ ಕಾಣಿಸುತ್ತಿದೆ.
ವಿಡಿಯೋ ಭಾರಿ ವ್ಯಾಪ್ತಿಯಲ್ಲಿ ವೈರಲ್ ಆದ ಬಳಿಕ, ಈ ವಿಷಯಕ್ಕೆ ಗಂಭೀರತೆ ನೀಡಿದ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅವರ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯನಿರ್ವಹಣಾಧಿಕಾರಿ ಭವರಸಿಂಗ್ ಮೀನಾ ಅವರು ಇಬ್ಬರನ್ನೂ ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಘಟನೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಪಾವತಿಗೆ ಸಂಬಂಧಿಸಿದ ಭ್ರಷ್ಟಾಚಾರದ ತೀವ್ರತೆಯತ್ತ ಬೆಳಕು ಚೆಲ್ಲಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…