ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಪೊಲೀಸರ ತನಿಖೆಯ ನಂತರ ಟ್ವಿಸ್ಟ್ ಸಿಕ್ಕಿದೆ ಅದೇನೆಂದರೆ ದೇಹವನ್ನು 56 ತುಂಡರಿಸಿದ ನಂತರ ಅದನ್ನು ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ನರಬಲಿಯಾದ ರೋಸ್ಲಿನ್ ಹಾಗೂ ಪದ್ಮಾ ಅವರನ್ನು ಕತ್ತು ಹಿಸುಕಿ ಸಾಯಿಸುವುದಕ್ಕೂ ಮೊದಲು ಅವರಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ. ಮಹಿಳೆಯರ ಸ್ತನಗಳನ್ನು ಕತ್ತರಿಸಿ, ರಕ್ತ ಹರಿಯುವಂತೆ ಮಾಡಲಾಗಿದ್ದು, ಬಳಿಕ ಒಂದು ದೇಹವನ್ನು 56 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಮಹಿಳೆಯರ ದೇಹದ ಭಾಗಗಳು ಒಟ್ಟು 3 ಹೊಂಡಗಳಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾಫಿ 2020ರಲ್ಲಿ 75 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಆತ ದಂಪತಿ ಭಗವಲ್ ಸಿಂಗ್ ಹಾಗೂ ಲೈಲಾಗೆ ಬೇಗನೆ ಹಣ ಗಳಿಸಲು ನರಬಲಿ ನೀಡುವಂತೆ ಸಲಹೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಫಿ ಸಾಮಾಜಿಕ ಮಾಧ್ಯಮಗಳಲ್ಲಿ ರೋಸ್ಲಿನ್ ಹಾಗೂ ಪದ್ಮಾರನ್ನು ಸಂಪರ್ಕಿಸಿ, ಅಶ್ಲೀಲ ಚಿತ್ರದಲ್ಲಿ ನಟಿಸಲು ಹಣದ ಆಮಿಷ ಒಡ್ಡಿದ್ದ ಎಂದು ಶಂಕಿಸಲಾಗಿದೆ. ನರಬಲಿ ವೇಳೆ ಶಫಿ ಪದ್ಮಾಳ ಕತ್ತು ಹಿಸುಕಿ, ಶಿರಚ್ಛೇದ ಮಾಡಿ ಆಕೆಯ ದೇಹವನ್ನು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಲೈಲಾ ರೋಸೆಲಿನ್ಳ ಕತ್ತು ಹಿಸುಕಿ, ಆಕೆಯ ಸ್ತನಗಳನ್ನು ಕತ್ತರಿಸಿದ್ದಾಳೆ. ಆಕೆಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…