ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಪೊಲೀಸರ ತನಿಖೆಯ ನಂತರ ಟ್ವಿಸ್ಟ್ ಸಿಕ್ಕಿದೆ ಅದೇನೆಂದರೆ ದೇಹವನ್ನು 56 ತುಂಡರಿಸಿದ ನಂತರ ಅದನ್ನು ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ನರಬಲಿಯಾದ ರೋಸ್ಲಿನ್ ಹಾಗೂ ಪದ್ಮಾ ಅವರನ್ನು ಕತ್ತು ಹಿಸುಕಿ ಸಾಯಿಸುವುದಕ್ಕೂ ಮೊದಲು ಅವರಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ. ಮಹಿಳೆಯರ ಸ್ತನಗಳನ್ನು ಕತ್ತರಿಸಿ, ರಕ್ತ ಹರಿಯುವಂತೆ ಮಾಡಲಾಗಿದ್ದು, ಬಳಿಕ ಒಂದು ದೇಹವನ್ನು 56 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಮಹಿಳೆಯರ ದೇಹದ ಭಾಗಗಳು ಒಟ್ಟು 3 ಹೊಂಡಗಳಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾಫಿ 2020ರಲ್ಲಿ 75 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಆತ ದಂಪತಿ ಭಗವಲ್ ಸಿಂಗ್ ಹಾಗೂ ಲೈಲಾಗೆ ಬೇಗನೆ ಹಣ ಗಳಿಸಲು ನರಬಲಿ ನೀಡುವಂತೆ ಸಲಹೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಫಿ ಸಾಮಾಜಿಕ ಮಾಧ್ಯಮಗಳಲ್ಲಿ ರೋಸ್ಲಿನ್ ಹಾಗೂ ಪದ್ಮಾರನ್ನು ಸಂಪರ್ಕಿಸಿ, ಅಶ್ಲೀಲ ಚಿತ್ರದಲ್ಲಿ ನಟಿಸಲು ಹಣದ ಆಮಿಷ ಒಡ್ಡಿದ್ದ ಎಂದು ಶಂಕಿಸಲಾಗಿದೆ. ನರಬಲಿ ವೇಳೆ ಶಫಿ ಪದ್ಮಾಳ ಕತ್ತು ಹಿಸುಕಿ, ಶಿರಚ್ಛೇದ ಮಾಡಿ ಆಕೆಯ ದೇಹವನ್ನು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಲೈಲಾ ರೋಸೆಲಿನ್ಳ ಕತ್ತು ಹಿಸುಕಿ, ಆಕೆಯ ಸ್ತನಗಳನ್ನು ಕತ್ತರಿಸಿದ್ದಾಳೆ. ಆಕೆಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…