Latest

ಮಹಿಳೆಯನ್ನು ನರಬಲಿ ಕೊಟ್ಟು ದೇಹವನ್ನು 56 ತುಂಡು ಮಾಡಿ ಸೇವಿಸಿರುವ ರಾಕ್ಷಸರು.

ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಪೊಲೀಸರ ತನಿಖೆಯ ನಂತರ ಟ್ವಿಸ್ಟ್ ಸಿಕ್ಕಿದೆ ಅದೇನೆಂದರೆ ದೇಹವನ್ನು 56 ತುಂಡರಿಸಿದ ನಂತರ ಅದನ್ನು ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ನರಬಲಿಯಾದ ರೋಸ್ಲಿನ್ ಹಾಗೂ ಪದ್ಮಾ ಅವರನ್ನು ಕತ್ತು ಹಿಸುಕಿ ಸಾಯಿಸುವುದಕ್ಕೂ ಮೊದಲು ಅವರಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ. ಮಹಿಳೆಯರ ಸ್ತನಗಳನ್ನು ಕತ್ತರಿಸಿ, ರಕ್ತ ಹರಿಯುವಂತೆ ಮಾಡಲಾಗಿದ್ದು, ಬಳಿಕ ಒಂದು ದೇಹವನ್ನು 56 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಮಹಿಳೆಯರ ದೇಹದ ಭಾಗಗಳು ಒಟ್ಟು 3 ಹೊಂಡಗಳಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾಫಿ 2020ರಲ್ಲಿ 75 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಆತ ದಂಪತಿ ಭಗವಲ್ ಸಿಂಗ್ ಹಾಗೂ ಲೈಲಾಗೆ ಬೇಗನೆ ಹಣ ಗಳಿಸಲು ನರಬಲಿ ನೀಡುವಂತೆ ಸಲಹೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಫಿ ಸಾಮಾಜಿಕ ಮಾಧ್ಯಮಗಳಲ್ಲಿ ರೋಸ್ಲಿನ್ ಹಾಗೂ ಪದ್ಮಾರನ್ನು ಸಂಪರ್ಕಿಸಿ, ಅಶ್ಲೀಲ ಚಿತ್ರದಲ್ಲಿ ನಟಿಸಲು ಹಣದ ಆಮಿಷ ಒಡ್ಡಿದ್ದ ಎಂದು ಶಂಕಿಸಲಾಗಿದೆ. ನರಬಲಿ ವೇಳೆ ಶಫಿ ಪದ್ಮಾಳ ಕತ್ತು ಹಿಸುಕಿ, ಶಿರಚ್ಛೇದ ಮಾಡಿ ಆಕೆಯ ದೇಹವನ್ನು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಲೈಲಾ ರೋಸೆಲಿನ್‌ಳ ಕತ್ತು ಹಿಸುಕಿ, ಆಕೆಯ ಸ್ತನಗಳನ್ನು ಕತ್ತರಿಸಿದ್ದಾಳೆ. ಆಕೆಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

11 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

12 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

14 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

14 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

14 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

2 days ago