Latest

ಮಹಿಳೆಯನ್ನು ನರಬಲಿ ಕೊಟ್ಟು ದೇಹವನ್ನು 56 ತುಂಡು ಮಾಡಿ ಸೇವಿಸಿರುವ ರಾಕ್ಷಸರು.

ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಪೊಲೀಸರ ತನಿಖೆಯ ನಂತರ ಟ್ವಿಸ್ಟ್ ಸಿಕ್ಕಿದೆ ಅದೇನೆಂದರೆ ದೇಹವನ್ನು 56 ತುಂಡರಿಸಿದ ನಂತರ ಅದನ್ನು ಸೇವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ನರಬಲಿಯಾದ ರೋಸ್ಲಿನ್ ಹಾಗೂ ಪದ್ಮಾ ಅವರನ್ನು ಕತ್ತು ಹಿಸುಕಿ ಸಾಯಿಸುವುದಕ್ಕೂ ಮೊದಲು ಅವರಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ. ಮಹಿಳೆಯರ ಸ್ತನಗಳನ್ನು ಕತ್ತರಿಸಿ, ರಕ್ತ ಹರಿಯುವಂತೆ ಮಾಡಲಾಗಿದ್ದು, ಬಳಿಕ ಒಂದು ದೇಹವನ್ನು 56 ತುಂಡುಗಳನ್ನಾಗಿ ಕತ್ತರಿಸಲಾಗಿದೆ. ಮಹಿಳೆಯರ ದೇಹದ ಭಾಗಗಳು ಒಟ್ಟು 3 ಹೊಂಡಗಳಲ್ಲಿ ಪತ್ತೆಯಾಗಿರುವುದಾಗಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾಫಿ 2020ರಲ್ಲಿ 75 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಆತ ದಂಪತಿ ಭಗವಲ್ ಸಿಂಗ್ ಹಾಗೂ ಲೈಲಾಗೆ ಬೇಗನೆ ಹಣ ಗಳಿಸಲು ನರಬಲಿ ನೀಡುವಂತೆ ಸಲಹೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಫಿ ಸಾಮಾಜಿಕ ಮಾಧ್ಯಮಗಳಲ್ಲಿ ರೋಸ್ಲಿನ್ ಹಾಗೂ ಪದ್ಮಾರನ್ನು ಸಂಪರ್ಕಿಸಿ, ಅಶ್ಲೀಲ ಚಿತ್ರದಲ್ಲಿ ನಟಿಸಲು ಹಣದ ಆಮಿಷ ಒಡ್ಡಿದ್ದ ಎಂದು ಶಂಕಿಸಲಾಗಿದೆ. ನರಬಲಿ ವೇಳೆ ಶಫಿ ಪದ್ಮಾಳ ಕತ್ತು ಹಿಸುಕಿ, ಶಿರಚ್ಛೇದ ಮಾಡಿ ಆಕೆಯ ದೇಹವನ್ನು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಲೈಲಾ ರೋಸೆಲಿನ್‌ಳ ಕತ್ತು ಹಿಸುಕಿ, ಆಕೆಯ ಸ್ತನಗಳನ್ನು ಕತ್ತರಿಸಿದ್ದಾಳೆ. ಆಕೆಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

35 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

37 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

38 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

39 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

41 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

43 minutes ago