Latest

ಹೆಚ್ಚುತ್ತಿದೆ ಡೆಂಗ್ಯೂ; ಮುಡಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಇಲ್ಲ ಆದ್ಯತೆ!

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು ಹೋಗುತ್ತಿಲ್ಲ ಅದರಲ್ಲಿ ಮಣ್ಣು, ಕಸ, ಪ್ಲಾಸ್ಟಿಕ್ ಹಾಗೂ ಪೊದೆಗಳು ಸಹ ಬೆಳೆದುಕೊಂಡಿದೆ. ನೀರು ಹೋಗಲು ಜಾಗವಿಲ್ಲದೆ ಅಲ್ಲೇ ನಿಲುತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಚರಂಡಿಗಳಲ್ಲಿ ನೀರು ನಿತ್ತು ಕೊಳೆಯುತ್ತಿದೆ ಆ ನೀರು ನಿಂತಿರುವ ಜಾಗದಿಂದಲೇ ಸೊಳ್ಳೆಗಳು ಸಹ ಬರುತ್ತಿವೆ. ಅಷ್ಟೇ ಅಲ್ಲ ಇನ್ನು ಚಾನೆಲ್, ಮೋರಿಗಳ ಮೇಲೆ ಕೊಳೆತು ಹೋಗಿರುವ ಪದಾರ್ಥ ಹಾಗೂ ಮನೆಯಲ್ಲಿ ಮೂರು ನಾಲ್ಕು ದಿನ ಇಟ್ಟುಕೊಂಡಿರುವ ಮುಸುರೆ ನೀರನ್ನು ಸಹ ಹಾಕುತ್ತಾರೆ. ಪೊದೆ ಬೆಳೆದುಕೊಂಡು ಮೋರಿಯು ಸಹ ಕಾಣಿಸುತ್ತಿಲ್ಲ, ನೀರು ಹೋಗಲುದಾರಿನು ಇಲ್ಲ. ಅಲ್ಲೇ ನೀರು ನಿಲ್ಲುತ್ತದೆ ಅಲ್ಲೂ ಸಹ ಮೊದಲೇ ಹೇಳಿದಂತೆ ಸೊಳ್ಳೆಗಳು ಬರುತ್ತಿವೆ. ಸೊಳ್ಳೆ ಹೆಚ್ಚಾದ ಕಾರಣ ಬರುವ ಡೆಂಗ್ಯೂ ಕಾಯಿಲೆ ಇಂದ ಜನರಿಗೆ ಸಮಸ್ಯೆ ಆಗುತ್ತದೆ. ಇದರ ಬಗ್ಗೆ ಮುಡುಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಭದ್ರಾಚಾರಿಯವರು ಕಾಳಜಿ ವಹಿಸಬೇಕು ಇಲ್ಲದಿದ್ದರೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಸಾಕಷ್ಟು ಜನ ಕಯಿಲ್ಲೆ ಬೀಳುತ್ತಾರೆ ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.

ವರದಿ: ನಜೀರ್ ಅಹಮದ್

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago