ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು ಹೋಗುತ್ತಿಲ್ಲ ಅದರಲ್ಲಿ ಮಣ್ಣು, ಕಸ, ಪ್ಲಾಸ್ಟಿಕ್ ಹಾಗೂ ಪೊದೆಗಳು ಸಹ ಬೆಳೆದುಕೊಂಡಿದೆ. ನೀರು ಹೋಗಲು ಜಾಗವಿಲ್ಲದೆ ಅಲ್ಲೇ ನಿಲುತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಚರಂಡಿಗಳಲ್ಲಿ ನೀರು ನಿತ್ತು ಕೊಳೆಯುತ್ತಿದೆ ಆ ನೀರು ನಿಂತಿರುವ ಜಾಗದಿಂದಲೇ ಸೊಳ್ಳೆಗಳು ಸಹ ಬರುತ್ತಿವೆ. ಅಷ್ಟೇ ಅಲ್ಲ ಇನ್ನು ಚಾನೆಲ್, ಮೋರಿಗಳ ಮೇಲೆ ಕೊಳೆತು ಹೋಗಿರುವ ಪದಾರ್ಥ ಹಾಗೂ ಮನೆಯಲ್ಲಿ ಮೂರು ನಾಲ್ಕು ದಿನ ಇಟ್ಟುಕೊಂಡಿರುವ ಮುಸುರೆ ನೀರನ್ನು ಸಹ ಹಾಕುತ್ತಾರೆ. ಪೊದೆ ಬೆಳೆದುಕೊಂಡು ಮೋರಿಯು ಸಹ ಕಾಣಿಸುತ್ತಿಲ್ಲ, ನೀರು ಹೋಗಲುದಾರಿನು ಇಲ್ಲ. ಅಲ್ಲೇ ನೀರು ನಿಲ್ಲುತ್ತದೆ ಅಲ್ಲೂ ಸಹ ಮೊದಲೇ ಹೇಳಿದಂತೆ ಸೊಳ್ಳೆಗಳು ಬರುತ್ತಿವೆ. ಸೊಳ್ಳೆ ಹೆಚ್ಚಾದ ಕಾರಣ ಬರುವ ಡೆಂಗ್ಯೂ ಕಾಯಿಲೆ ಇಂದ ಜನರಿಗೆ ಸಮಸ್ಯೆ ಆಗುತ್ತದೆ. ಇದರ ಬಗ್ಗೆ ಮುಡುಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಭದ್ರಾಚಾರಿಯವರು ಕಾಳಜಿ ವಹಿಸಬೇಕು ಇಲ್ಲದಿದ್ದರೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಸಾಕಷ್ಟು ಜನ ಕಯಿಲ್ಲೆ ಬೀಳುತ್ತಾರೆ ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
ವರದಿ: ನಜೀರ್ ಅಹಮದ್
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…