Latest

ಡೆನ್ವರ್ ವಿಮಾನ ನಿಲ್ದಾಣದಲ್ಲಿ ಭೀಕರ ಅನಾಹುತ ತಪ್ಪಿದ ಘಟನೆ: 173 ಪ್ರಯಾಣಿಕರ ಜೀವ ಉಳಿಸಿದ ತ್ವರಿತ ಕ್ರಮ

ನ್ಯೂಯಾರ್ಕ್ – ಅಮೆರಿಕಾದ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಭಾರತೀಯ ಸಮಯ ಪ್ರಕಾರ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಸಂಭವಿಸಿದೆ. ಮಿಯಾಮಿಗೆ ತೆರಳಲು ಸಿದ್ಧವಾಗಿದ್ದ ಅಮೆರಿಕನ್ ಏರ್ಲೈನ್ಸ್‌ನ ಬೋಯಿಂಗ್ 737 MAX 8 ವಿಮಾನವು ಟೇಕ್ ಆಫ್‌ಗೆ ತಯಾರಾಗುವ ಸಂದರ್ಭದಲ್ಲೇ ಲ್ಯಾಂಡಿಂಗ್ ಗೇರ್ ವೈಫಲ್ಯದಿಂದ ಬೆಂಕಿ ಹೊತ್ತಿಕೊಂಡು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.

ತಕ್ಷಣದ ಪ್ರತಿಕ್ರಿಯೆಯಿಂದ 173 ಜನರ ಜೀವ ರಕ್ಷಣೆ

AA-3023 ವಿಮಾನದಲ್ಲಿ ಒಟ್ಟು 173 ಪ್ರಯಾಣಿಕರು ಹಾಗೂ ಸಿಬ್ಬಂದಿ ಇದ್ದರು. ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಉಂಟಾದ ಬೆಂಕಿ ಮತ್ತು ಹೊಗೆ ವಿಮಾನದ ಸುತ್ತಲೂ ಆವರಿಸಿತ್ತು. ತಕ್ಷಣವೇ ತುರ್ತು ಸ್ಥಿತಿಯನ್ನು ಘೋಷಿಸಿದ ಸಿಬ್ಬಂದಿ, ಎಲ್ಲಾ ಪ್ರಯಾಣಿಕರನ್ನು ಎಮರ್ಜೆನ್ಸಿ ಚ್ಯೂಟ್‌ಗಳ ಮೂಲಕ ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಿದರು. ಈ ವೇಳೆ ಒಬ್ಬ ವ್ಯಕ್ತಿಗೆ ಮಾತ್ರ ಸಣ್ಣ ಪುಟ್ಟ ಗಾಯವಾಗಿದೆ ಎನ್ನಲಾಗಿದೆ.

ರನ್‌ವೇ ಮೇಲೆ ಬೆಂಕಿ ತಗಲಿದ ಲ್ಯಾಂಡಿಂಗ್ ಗೇರ್

ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:45ರ ವೇಳೆಗೆ ಡೆನ್ವರ್‌ನಿಂದ ಹೊರಡುವಾಗ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿತು. ಟೈರ್ ನಿರ್ವಹಣಾ ಸಮಸ್ಯೆಯಿಂದ ಈ ತುರ್ತು ಪರಿಸ್ಥಿತಿ ಉಂಟಾಗಿ, ಟೇಕ್ ಆಫ್ ಅನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ನಂತರ ವಿಮಾನದ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣ ಸಿಬ್ಬಂದಿ ತಕ್ಷಣ ಅಗ್ನಿಶಾಮಕದೊಂದಿಗೆ ಹೊಡೆದೊತ್ತಿ ನಿಯಂತ್ರಣಕ್ಕೆ ತಂದರು.

ಪ್ರಶಸ್ತ ತನಿಖೆಗೆ ಎಫ್‌ಎಎ ಸೂಚನೆ

ಅಮೆರಿಕದ ಫೆಡರಲ್ ಏವಿಯೇಶನ್ ಅಡ್ಮಿನಿಸ್ಟ್ರೇಶನ್ (FAA) ಘಟನೆಯ ಬಗ್ಗೆ ಅಧಿಕೃತ ಪ್ರತಿಕ್ರಿಯೆ ನೀಡಿದ್ದು, ವಿಮಾನದಲ್ಲಿ ಉಂಟಾದ ದೋಷದ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ. ವಿಮಾನದಲ್ಲಿ ಸಂಭವಿಸಿದ ತಾಂತ್ರಿಕ ದೋಷ ಏನೆಂಬುದನ್ನು ಗುರುತಿಸಿ, ಇಂತಹ ಘಟನೆಗಳು ಮರುಕಳಿಸದಂತೆ ತಕ್ಷಣದ ಕ್ರಮ ಕೈಗೊಳ್ಳಲಾಗುವುದು ಎಂದಿದೆ.

nazeer ahamad

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

28 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

30 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

31 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

33 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

34 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

36 minutes ago