ನೆಲಮಂಗಲ: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಗೆ ಕಾರಣವಾಗುವ ರೀತಿಯ ಹೇಳಿಕೆಗಳನ್ನು ನೀಡಿದ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನೆಲಮಂಗಲ ನಿವಾಸಿ ಅನಂತಕುಮಾರ್ ಡಿ.ಆರ್. ಅವರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಪೊಲೀಸರು ನಾನ್-ಕಾಗ್ನಿಜಬಲ್ ವರದಿ (ಎನ್ಸಿಆರ್) ದಾಖಲಿಸಿಕೊಂಡು ಪ್ರಕರಣವನ್ನು ಪರಿಶೀಲನೆಗೆ ತೆಗೆದುಕೊಂಡಿದ್ದಾರೆ.
ದೂರಿನ ಪ್ರಕಾರ, ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಹುಟ್ಟುಹಾಕುವ ರೀತಿಯ ಹೇಳಿಕೆಗಳನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ನಿರೂಪಕ ಅರುಣ್ ಬಡಿಗೇರ್ ಹಾಗೂ ಸಂಬಂಧಿತ ಖಾಸಗಿ ವಾಹಿನಿಯ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ತಾಯಿ-ಮಗನ ಪವಿತ್ರ ಬಾಂಧವ್ಯಕ್ಕೆ ಕಳಂಕ ತರುವಂತಹ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಸವತಿ ಮಗನೊಂದಿಗೆ ಅನೈತಿಕ…
ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, MLC ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ₹1.50…
ಬಿಹಾರ: ಮದುವೆಯಾಗುವ ಭರವಸೆ ನೀಡಿ ಬಳಿಕ ನಿರಾಕರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ಭೀಕರ ಸ್ವರೂಪ ಪಡೆದುಕೊಂಡಿದ್ದು, ಮಹಿಳೆಯೊಬ್ಬರನ್ನು ಬೈಕ್ನಲ್ಲಿ…
ಒಡಿಶಾ: ನಾಲ್ಕು ವರ್ಷಗಳ ಹಿಂದೆ ನಡೆದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸೌಮ್ಯರಂಜನ್ ಮೊಹಾಪಾತ್ರ ಅವರ ಅನುಮಾನಾಸ್ಪದ ಸಾವು ಪ್ರಕರಣ…
ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಜನಿಸಿದ ಕೇವಲ ಎರಡು ದಿನಗಳ ಗಂಡು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ನಾಪತ್ತೆಯಾಗಿರುವ…
ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ಮತ್ತು ಬಡ್ಡಿ ಕಿರುಕುಳದಿಂದ ಒಂದೇ ಕುಟುಂಬ ಸಂಪೂರ್ಣವಾಗಿ ನಾಶವಾದ ಮನಕಲಕುವ ಘಟನೆ…