Categories: CrimeLatest

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲದಲ್ಲಿ ದೂರು ದಾಖಲು

ನೆಲಮಂಗಲ: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಗೆ ಕಾರಣವಾಗುವ ರೀತಿಯ ಹೇಳಿಕೆಗಳನ್ನು ನೀಡಿದ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೆಲಮಂಗಲ ನಿವಾಸಿ ಅನಂತಕುಮಾರ್ ಡಿ.ಆರ್. ಅವರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಪೊಲೀಸರು ನಾನ್-ಕಾಗ್ನಿಜಬಲ್ ವರದಿ (ಎನ್‌ಸಿಆರ್) ದಾಖಲಿಸಿಕೊಂಡು ಪ್ರಕರಣವನ್ನು ಪರಿಶೀಲನೆಗೆ ತೆಗೆದುಕೊಂಡಿದ್ದಾರೆ.

ದೂರಿನ ಪ್ರಕಾರ, ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಹುಟ್ಟುಹಾಕುವ ರೀತಿಯ ಹೇಳಿಕೆಗಳನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ನಿರೂಪಕ ಅರುಣ್ ಬಡಿಗೇರ್ ಹಾಗೂ ಸಂಬಂಧಿತ ಖಾಸಗಿ ವಾಹಿನಿಯ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಲತಾಯಿ ಜೊತೆ ಆಕ್ರಮ ಸಂಬಂಧ, ಬೇರೆ ಮದುವೆಯಾಗಲು ಹೊರಟ ಸವತಿ ಮಗನನ್ನು ಕೊಲ್ಲಿಸೇ ಬಿಟ್ಟಳು..!

ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ತಾಯಿ-ಮಗನ ಪವಿತ್ರ ಬಾಂಧವ್ಯಕ್ಕೆ ಕಳಂಕ ತರುವಂತಹ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಸವತಿ ಮಗನೊಂದಿಗೆ ಅನೈತಿಕ…

12 hours ago

MLC ಸ್ಥಾನ ಕೊಡಿಸುವುದಾಗಿ ₹1.5 ಕೋಟಿ ವಂಚನೆ; ಕಾಂಗ್ರೆಸ್ ನಾಯಕರ ಹೆಸರು ಬಳಸಿ ಮಹಿಳೆಗೆ ಮೋಸ, ಲೈಂಗಿಕ ಕಿರುಕುಳ ಆರೋಪ!

ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, MLC ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ₹1.50…

12 hours ago

ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆಯನ್ನೇ ಬೈಕ್ ನಲ್ಲಿ ಎಳೆದುಕೊಂಡು ಹೋದ ಪ್ರಿಯಕರ! 100 ಮೀಟರ್ ಭೀಕರ ದೃಶ್ಯ ವೈರಲ್

ಬಿಹಾರ: ಮದುವೆಯಾಗುವ ಭರವಸೆ ನೀಡಿ ಬಳಿಕ ನಿರಾಕರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ಭೀಕರ ಸ್ವರೂಪ ಪಡೆದುಕೊಂಡಿದ್ದು, ಮಹಿಳೆಯೊಬ್ಬರನ್ನು ಬೈಕ್‌ನಲ್ಲಿ…

12 hours ago

4 ವರ್ಷಗಳಾದರೂ ಬಯಲಾಗದ ACF ಸಾವು ರಹಸ್ಯ: ಪತ್ನಿ ಆರೋಪಿಯೇ, ಅಥವಾ ನಿರಪರಾಧಿಯೇ?

ಒಡಿಶಾ: ನಾಲ್ಕು ವರ್ಷಗಳ ಹಿಂದೆ ನಡೆದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸೌಮ್ಯರಂಜನ್ ಮೊಹಾಪಾತ್ರ ಅವರ ಅನುಮಾನಾಸ್ಪದ ಸಾವು ಪ್ರಕರಣ…

12 hours ago

ಹುಟ್ಟಿದ ಎರಡು ದಿನದಲ್ಲೇ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ನಾಪತ್ತೆ; NICUನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂದಮ್ಮ

ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಜನಿಸಿದ ಕೇವಲ ಎರಡು ದಿನಗಳ ಗಂಡು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ನಾಪತ್ತೆಯಾಗಿರುವ…

12 hours ago

ಕನಸಿನ ಮನೆಯ ಸಾಲವೇ ಕುಟುಂಬಕ್ಕೆ ಸಾವಿನ ಉರುಳು; ಪತ್ನಿ, ಮಕ್ಕಳ ಬಳಿಕ ಪತಿಯೂ ಕೊನೆಯುಸಿರು

ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ಮತ್ತು ಬಡ್ಡಿ ಕಿರುಕುಳದಿಂದ ಒಂದೇ ಕುಟುಂಬ ಸಂಪೂರ್ಣವಾಗಿ ನಾಶವಾದ ಮನಕಲಕುವ ಘಟನೆ…

12 hours ago