Latest

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ.

ದೇವರಹಿಪ್ಪರಗಿ: ಹಳೆಯ ಬಸ್‌ನಿಲ್ದಾಣದ ಕಟ್ಟಡವನ್ನು ನವೀಕರಣದ ಹೆಸರಿನಲ್ಲಿ ಕೆಡವಿ ಬಿಟ್ಟಿದ್ದಾರೆ. ಕಟ್ಟಡ ಮಾಡಿ ಒಳ್ಳೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಿ ಆದರೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಮತ್ತು ಬಸ್ ನಿಲ್ಲಿಸಲು ವ್ಯವಸ್ಥೆ ಮಾಡಿ ಅನುಕೂಲಮಾಡಿ ಕೊಡಬೇಕಿತ್ತು.
ಆದರೆ ಆ ವ್ಯವಸ್ಥೆ ಮಾಡದೆ ಇರುವುದರಿಂದ ಪರದಾಡುತ್ತಿರುವ ಚಾಲಕರು ಮತ್ತು ಪ್ರಯಾಣಿಕರು, ಈ ಬಸ್‌ನಿಲ್ದಾಣ ಕಟ್ಟಡ ಕೆಡವಿದರಿಂದ ಪ್ರಯಾಣಿಕರು ಫಜೀತಿ ಪಡುವಂತಾಗಿದೆ.
ಇದರಿಂದ ಬಸ್ಸಗಾಗಿ ಕಾಯುತ್ತಿರುವ ಪ್ರಯಾಣಿಕರು ಎಲ್ಲೆಂದರಲ್ಲಿ ನಿಲ್ಲುವಂತಾಗಿದೆ. ಚಾಲಕರು ಬಸ್ ಎಲ್ಲಿ ನಿಲ್ಲಿಸುವುದೆಂದು ಗೊಂದಲಕ್ಕೆ ಒಳಗಾಗಿದರೆ.
ಒಂದು ಬಸ್ ಇನ್ನೊಂದು ಬಸ್ಸಿಗೆ ಜಾಗ ಮಾಡಿಕೊಡುವುದಕ್ಕೆ ಮುಂದಕ್ಕೆ ಚಲಿಸಿ ನಿಯಂತ್ರಣ ತಪ್ಪಿದರೆ ಅಂಗಡಿಯತ್ತ ಬಸ್ ನುಗ್ಗಿ ಅನಾಹುತ ಸಂಭವಿಸಬಹುದು.
ಈ ಬಸ್ ನಿಲ್ದಾಣದಲ್ಲಿ ಮಳೆ ನೀರು ನಿಂತು ಕೆಸರು ಗದ್ದೆಯಂತೆಯಾಗಿ ಪ್ರಯಾಣಿಕರು, ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ದೇವರಹಿಪ್ಪರಗಿ ಇದು ತಾಲೂಕು ಕೇಂದ್ರವಾಗಿರುವದರಿಂದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಈ ಪಟ್ಟಣಕ್ಕೆ ಆಗಮಿಸುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಜನ – ಜಂಗುಳಿಯಿಂದ ಕೂಡಿರುತ್ತದೆ. ವಿಜಯಪುರ, ಗುಲ್ಬರ್ಗಾ, ಇಂಡಿ, ತಾಳಿಕೋಟೆ, ಬಸವನ ಬಾಗೇವಾಡಿ, ಹೂ ಹಿಪ್ಪರಗಿ ಊರುಗಳಿಗೆ ಹೋಗಬೇಕಾದರೆ ದೇವರಹಿಪ್ಪರಗಿ ಪಟ್ಟಣದ ಮಾರ್ಗಗದಿಂದ ಬಸ್ ಬದಲಾವಣೆ ಮಾಡಿಕೊಂಡು ಹೋಗಬೇಕಾಗುತ್ತದೆ. ಮತ್ತು ಹಳ್ಳಿಗಾಡಿನ ಜನ ತಮ್ಮ ಗ್ರಾಮಕ್ಕೆ ಹೋಗಬೇಕಾದರೆ ಈ ಪಟ್ಟಣದಿಂದ ಬಸ್ ಹಿಡಿದು ತಮ್ಮ ಹಳ್ಳಿಗಳಿಗೆ ಹೋಗಬೇಕಾಗುತ್ತದೆ.
ಪ್ರಯಾಣಿಕರು ಮಳೆಯಲ್ಲಿ ನಿಂತುಕೊಂಡೆ ಬಸ್ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಕಾಲದಲ್ಲಿ ಬಸ್ಸಿಗೆ ಕಾಯುವ ಪ್ರಯಾಣಿಕರು ಅಲ್ಲಿ-ಇಲ್ಲಿ ನಿಂತು, ಕುಳಿತು ಸಾಗುತ್ತಿದ್ದರು. ಆದರೆ ಈಗ ಮಳೆಗಾಲ ಪ್ರಾರಂಭವಾಗಿದೆ ಇದರಿಂದ ಜನರ ಪರಿಸ್ಥಿತಿ ಹೈರಾಣಗುತ್ತಿದೆ. ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಲ್ಲ, ಚಾಹದ ಅಂಗಡಿಯಲ್ಲಿ ಚಾಹ ಕುಡಿದರೆ ಮಾತ್ರ ನೀರು ಕುಡಿಯಲು ಕೊಡುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಕುಳಿತು ಕೊಳ್ಳಲು ಬಿಡಿ ನಿಂತುಕೊಳ್ಳಲು ವ್ಯವಸ್ಥೆಯಿಲ್ಲ ಎಂದು ಪ್ರಯಾಣಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧಪಟ್ಟ ಇಲಾಖೆಯವರು, ಶಾಸಕರು ಗುತ್ತಿಗೆ ಹಿಡಿದಂತ ಗುತ್ತಿಗೆದಾರ ಈ ಕಡೆ ಸ್ವಲ್ಪ ಲಕ್ಷ್ಯವಹಿಸಿದರೆ ಪ್ರಯಾಣಿಕರು ಸುರಕ್ಷಿತವಾಗಿ ಮಳೆಗಾಲವನ್ನು ಕಳೆಯಬಹುದು.
ವರದಿ : ಮಹಾಂತೇಶ ಹಾದಿಮನಿ

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago