Latest

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ.

ದೇವರಹಿಪ್ಪರಗಿ: ಹಳೆಯ ಬಸ್‌ನಿಲ್ದಾಣದ ಕಟ್ಟಡವನ್ನು ನವೀಕರಣದ ಹೆಸರಿನಲ್ಲಿ ಕೆಡವಿ ಬಿಟ್ಟಿದ್ದಾರೆ. ಕಟ್ಟಡ ಮಾಡಿ ಒಳ್ಳೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಿ ಆದರೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಮತ್ತು ಬಸ್ ನಿಲ್ಲಿಸಲು ವ್ಯವಸ್ಥೆ ಮಾಡಿ ಅನುಕೂಲಮಾಡಿ ಕೊಡಬೇಕಿತ್ತು.
ಆದರೆ ಆ ವ್ಯವಸ್ಥೆ ಮಾಡದೆ ಇರುವುದರಿಂದ ಪರದಾಡುತ್ತಿರುವ ಚಾಲಕರು ಮತ್ತು ಪ್ರಯಾಣಿಕರು, ಈ ಬಸ್‌ನಿಲ್ದಾಣ ಕಟ್ಟಡ ಕೆಡವಿದರಿಂದ ಪ್ರಯಾಣಿಕರು ಫಜೀತಿ ಪಡುವಂತಾಗಿದೆ.
ಇದರಿಂದ ಬಸ್ಸಗಾಗಿ ಕಾಯುತ್ತಿರುವ ಪ್ರಯಾಣಿಕರು ಎಲ್ಲೆಂದರಲ್ಲಿ ನಿಲ್ಲುವಂತಾಗಿದೆ. ಚಾಲಕರು ಬಸ್ ಎಲ್ಲಿ ನಿಲ್ಲಿಸುವುದೆಂದು ಗೊಂದಲಕ್ಕೆ ಒಳಗಾಗಿದರೆ.
ಒಂದು ಬಸ್ ಇನ್ನೊಂದು ಬಸ್ಸಿಗೆ ಜಾಗ ಮಾಡಿಕೊಡುವುದಕ್ಕೆ ಮುಂದಕ್ಕೆ ಚಲಿಸಿ ನಿಯಂತ್ರಣ ತಪ್ಪಿದರೆ ಅಂಗಡಿಯತ್ತ ಬಸ್ ನುಗ್ಗಿ ಅನಾಹುತ ಸಂಭವಿಸಬಹುದು.
ಈ ಬಸ್ ನಿಲ್ದಾಣದಲ್ಲಿ ಮಳೆ ನೀರು ನಿಂತು ಕೆಸರು ಗದ್ದೆಯಂತೆಯಾಗಿ ಪ್ರಯಾಣಿಕರು, ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ದೇವರಹಿಪ್ಪರಗಿ ಇದು ತಾಲೂಕು ಕೇಂದ್ರವಾಗಿರುವದರಿಂದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಈ ಪಟ್ಟಣಕ್ಕೆ ಆಗಮಿಸುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಜನ – ಜಂಗುಳಿಯಿಂದ ಕೂಡಿರುತ್ತದೆ. ವಿಜಯಪುರ, ಗುಲ್ಬರ್ಗಾ, ಇಂಡಿ, ತಾಳಿಕೋಟೆ, ಬಸವನ ಬಾಗೇವಾಡಿ, ಹೂ ಹಿಪ್ಪರಗಿ ಊರುಗಳಿಗೆ ಹೋಗಬೇಕಾದರೆ ದೇವರಹಿಪ್ಪರಗಿ ಪಟ್ಟಣದ ಮಾರ್ಗಗದಿಂದ ಬಸ್ ಬದಲಾವಣೆ ಮಾಡಿಕೊಂಡು ಹೋಗಬೇಕಾಗುತ್ತದೆ. ಮತ್ತು ಹಳ್ಳಿಗಾಡಿನ ಜನ ತಮ್ಮ ಗ್ರಾಮಕ್ಕೆ ಹೋಗಬೇಕಾದರೆ ಈ ಪಟ್ಟಣದಿಂದ ಬಸ್ ಹಿಡಿದು ತಮ್ಮ ಹಳ್ಳಿಗಳಿಗೆ ಹೋಗಬೇಕಾಗುತ್ತದೆ.
ಪ್ರಯಾಣಿಕರು ಮಳೆಯಲ್ಲಿ ನಿಂತುಕೊಂಡೆ ಬಸ್ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಕಾಲದಲ್ಲಿ ಬಸ್ಸಿಗೆ ಕಾಯುವ ಪ್ರಯಾಣಿಕರು ಅಲ್ಲಿ-ಇಲ್ಲಿ ನಿಂತು, ಕುಳಿತು ಸಾಗುತ್ತಿದ್ದರು. ಆದರೆ ಈಗ ಮಳೆಗಾಲ ಪ್ರಾರಂಭವಾಗಿದೆ ಇದರಿಂದ ಜನರ ಪರಿಸ್ಥಿತಿ ಹೈರಾಣಗುತ್ತಿದೆ. ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಲ್ಲ, ಚಾಹದ ಅಂಗಡಿಯಲ್ಲಿ ಚಾಹ ಕುಡಿದರೆ ಮಾತ್ರ ನೀರು ಕುಡಿಯಲು ಕೊಡುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಕುಳಿತು ಕೊಳ್ಳಲು ಬಿಡಿ ನಿಂತುಕೊಳ್ಳಲು ವ್ಯವಸ್ಥೆಯಿಲ್ಲ ಎಂದು ಪ್ರಯಾಣಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧಪಟ್ಟ ಇಲಾಖೆಯವರು, ಶಾಸಕರು ಗುತ್ತಿಗೆ ಹಿಡಿದಂತ ಗುತ್ತಿಗೆದಾರ ಈ ಕಡೆ ಸ್ವಲ್ಪ ಲಕ್ಷ್ಯವಹಿಸಿದರೆ ಪ್ರಯಾಣಿಕರು ಸುರಕ್ಷಿತವಾಗಿ ಮಳೆಗಾಲವನ್ನು ಕಳೆಯಬಹುದು.
ವರದಿ : ಮಹಾಂತೇಶ ಹಾದಿಮನಿ

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

14 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

15 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

16 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

17 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

18 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

21 hours ago