Latest

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ.

ದೇವರಹಿಪ್ಪರಗಿ: ಹಳೆಯ ಬಸ್‌ನಿಲ್ದಾಣದ ಕಟ್ಟಡವನ್ನು ನವೀಕರಣದ ಹೆಸರಿನಲ್ಲಿ ಕೆಡವಿ ಬಿಟ್ಟಿದ್ದಾರೆ. ಕಟ್ಟಡ ಮಾಡಿ ಒಳ್ಳೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಿ ಆದರೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಮತ್ತು ಬಸ್ ನಿಲ್ಲಿಸಲು ವ್ಯವಸ್ಥೆ ಮಾಡಿ ಅನುಕೂಲಮಾಡಿ ಕೊಡಬೇಕಿತ್ತು.
ಆದರೆ ಆ ವ್ಯವಸ್ಥೆ ಮಾಡದೆ ಇರುವುದರಿಂದ ಪರದಾಡುತ್ತಿರುವ ಚಾಲಕರು ಮತ್ತು ಪ್ರಯಾಣಿಕರು, ಈ ಬಸ್‌ನಿಲ್ದಾಣ ಕಟ್ಟಡ ಕೆಡವಿದರಿಂದ ಪ್ರಯಾಣಿಕರು ಫಜೀತಿ ಪಡುವಂತಾಗಿದೆ.
ಇದರಿಂದ ಬಸ್ಸಗಾಗಿ ಕಾಯುತ್ತಿರುವ ಪ್ರಯಾಣಿಕರು ಎಲ್ಲೆಂದರಲ್ಲಿ ನಿಲ್ಲುವಂತಾಗಿದೆ. ಚಾಲಕರು ಬಸ್ ಎಲ್ಲಿ ನಿಲ್ಲಿಸುವುದೆಂದು ಗೊಂದಲಕ್ಕೆ ಒಳಗಾಗಿದರೆ.
ಒಂದು ಬಸ್ ಇನ್ನೊಂದು ಬಸ್ಸಿಗೆ ಜಾಗ ಮಾಡಿಕೊಡುವುದಕ್ಕೆ ಮುಂದಕ್ಕೆ ಚಲಿಸಿ ನಿಯಂತ್ರಣ ತಪ್ಪಿದರೆ ಅಂಗಡಿಯತ್ತ ಬಸ್ ನುಗ್ಗಿ ಅನಾಹುತ ಸಂಭವಿಸಬಹುದು.
ಈ ಬಸ್ ನಿಲ್ದಾಣದಲ್ಲಿ ಮಳೆ ನೀರು ನಿಂತು ಕೆಸರು ಗದ್ದೆಯಂತೆಯಾಗಿ ಪ್ರಯಾಣಿಕರು, ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ದೇವರಹಿಪ್ಪರಗಿ ಇದು ತಾಲೂಕು ಕೇಂದ್ರವಾಗಿರುವದರಿಂದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಈ ಪಟ್ಟಣಕ್ಕೆ ಆಗಮಿಸುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಜನ – ಜಂಗುಳಿಯಿಂದ ಕೂಡಿರುತ್ತದೆ. ವಿಜಯಪುರ, ಗುಲ್ಬರ್ಗಾ, ಇಂಡಿ, ತಾಳಿಕೋಟೆ, ಬಸವನ ಬಾಗೇವಾಡಿ, ಹೂ ಹಿಪ್ಪರಗಿ ಊರುಗಳಿಗೆ ಹೋಗಬೇಕಾದರೆ ದೇವರಹಿಪ್ಪರಗಿ ಪಟ್ಟಣದ ಮಾರ್ಗಗದಿಂದ ಬಸ್ ಬದಲಾವಣೆ ಮಾಡಿಕೊಂಡು ಹೋಗಬೇಕಾಗುತ್ತದೆ. ಮತ್ತು ಹಳ್ಳಿಗಾಡಿನ ಜನ ತಮ್ಮ ಗ್ರಾಮಕ್ಕೆ ಹೋಗಬೇಕಾದರೆ ಈ ಪಟ್ಟಣದಿಂದ ಬಸ್ ಹಿಡಿದು ತಮ್ಮ ಹಳ್ಳಿಗಳಿಗೆ ಹೋಗಬೇಕಾಗುತ್ತದೆ.
ಪ್ರಯಾಣಿಕರು ಮಳೆಯಲ್ಲಿ ನಿಂತುಕೊಂಡೆ ಬಸ್ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಕಾಲದಲ್ಲಿ ಬಸ್ಸಿಗೆ ಕಾಯುವ ಪ್ರಯಾಣಿಕರು ಅಲ್ಲಿ-ಇಲ್ಲಿ ನಿಂತು, ಕುಳಿತು ಸಾಗುತ್ತಿದ್ದರು. ಆದರೆ ಈಗ ಮಳೆಗಾಲ ಪ್ರಾರಂಭವಾಗಿದೆ ಇದರಿಂದ ಜನರ ಪರಿಸ್ಥಿತಿ ಹೈರಾಣಗುತ್ತಿದೆ. ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಲ್ಲ, ಚಾಹದ ಅಂಗಡಿಯಲ್ಲಿ ಚಾಹ ಕುಡಿದರೆ ಮಾತ್ರ ನೀರು ಕುಡಿಯಲು ಕೊಡುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಕುಳಿತು ಕೊಳ್ಳಲು ಬಿಡಿ ನಿಂತುಕೊಳ್ಳಲು ವ್ಯವಸ್ಥೆಯಿಲ್ಲ ಎಂದು ಪ್ರಯಾಣಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧಪಟ್ಟ ಇಲಾಖೆಯವರು, ಶಾಸಕರು ಗುತ್ತಿಗೆ ಹಿಡಿದಂತ ಗುತ್ತಿಗೆದಾರ ಈ ಕಡೆ ಸ್ವಲ್ಪ ಲಕ್ಷ್ಯವಹಿಸಿದರೆ ಪ್ರಯಾಣಿಕರು ಸುರಕ್ಷಿತವಾಗಿ ಮಳೆಗಾಲವನ್ನು ಕಳೆಯಬಹುದು.
ವರದಿ : ಮಹಾಂತೇಶ ಹಾದಿಮನಿ

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago