Latest

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ.

ದೇವರಹಿಪ್ಪರಗಿ: ಹಳೆಯ ಬಸ್‌ನಿಲ್ದಾಣದ ಕಟ್ಟಡವನ್ನು ನವೀಕರಣದ ಹೆಸರಿನಲ್ಲಿ ಕೆಡವಿ ಬಿಟ್ಟಿದ್ದಾರೆ. ಕಟ್ಟಡ ಮಾಡಿ ಒಳ್ಳೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಿ ಆದರೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಮತ್ತು ಬಸ್ ನಿಲ್ಲಿಸಲು ವ್ಯವಸ್ಥೆ ಮಾಡಿ ಅನುಕೂಲಮಾಡಿ ಕೊಡಬೇಕಿತ್ತು.
ಆದರೆ ಆ ವ್ಯವಸ್ಥೆ ಮಾಡದೆ ಇರುವುದರಿಂದ ಪರದಾಡುತ್ತಿರುವ ಚಾಲಕರು ಮತ್ತು ಪ್ರಯಾಣಿಕರು, ಈ ಬಸ್‌ನಿಲ್ದಾಣ ಕಟ್ಟಡ ಕೆಡವಿದರಿಂದ ಪ್ರಯಾಣಿಕರು ಫಜೀತಿ ಪಡುವಂತಾಗಿದೆ.
ಇದರಿಂದ ಬಸ್ಸಗಾಗಿ ಕಾಯುತ್ತಿರುವ ಪ್ರಯಾಣಿಕರು ಎಲ್ಲೆಂದರಲ್ಲಿ ನಿಲ್ಲುವಂತಾಗಿದೆ. ಚಾಲಕರು ಬಸ್ ಎಲ್ಲಿ ನಿಲ್ಲಿಸುವುದೆಂದು ಗೊಂದಲಕ್ಕೆ ಒಳಗಾಗಿದರೆ.
ಒಂದು ಬಸ್ ಇನ್ನೊಂದು ಬಸ್ಸಿಗೆ ಜಾಗ ಮಾಡಿಕೊಡುವುದಕ್ಕೆ ಮುಂದಕ್ಕೆ ಚಲಿಸಿ ನಿಯಂತ್ರಣ ತಪ್ಪಿದರೆ ಅಂಗಡಿಯತ್ತ ಬಸ್ ನುಗ್ಗಿ ಅನಾಹುತ ಸಂಭವಿಸಬಹುದು.
ಈ ಬಸ್ ನಿಲ್ದಾಣದಲ್ಲಿ ಮಳೆ ನೀರು ನಿಂತು ಕೆಸರು ಗದ್ದೆಯಂತೆಯಾಗಿ ಪ್ರಯಾಣಿಕರು, ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ದೇವರಹಿಪ್ಪರಗಿ ಇದು ತಾಲೂಕು ಕೇಂದ್ರವಾಗಿರುವದರಿಂದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಈ ಪಟ್ಟಣಕ್ಕೆ ಆಗಮಿಸುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಜನ – ಜಂಗುಳಿಯಿಂದ ಕೂಡಿರುತ್ತದೆ. ವಿಜಯಪುರ, ಗುಲ್ಬರ್ಗಾ, ಇಂಡಿ, ತಾಳಿಕೋಟೆ, ಬಸವನ ಬಾಗೇವಾಡಿ, ಹೂ ಹಿಪ್ಪರಗಿ ಊರುಗಳಿಗೆ ಹೋಗಬೇಕಾದರೆ ದೇವರಹಿಪ್ಪರಗಿ ಪಟ್ಟಣದ ಮಾರ್ಗಗದಿಂದ ಬಸ್ ಬದಲಾವಣೆ ಮಾಡಿಕೊಂಡು ಹೋಗಬೇಕಾಗುತ್ತದೆ. ಮತ್ತು ಹಳ್ಳಿಗಾಡಿನ ಜನ ತಮ್ಮ ಗ್ರಾಮಕ್ಕೆ ಹೋಗಬೇಕಾದರೆ ಈ ಪಟ್ಟಣದಿಂದ ಬಸ್ ಹಿಡಿದು ತಮ್ಮ ಹಳ್ಳಿಗಳಿಗೆ ಹೋಗಬೇಕಾಗುತ್ತದೆ.
ಪ್ರಯಾಣಿಕರು ಮಳೆಯಲ್ಲಿ ನಿಂತುಕೊಂಡೆ ಬಸ್ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಕಾಲದಲ್ಲಿ ಬಸ್ಸಿಗೆ ಕಾಯುವ ಪ್ರಯಾಣಿಕರು ಅಲ್ಲಿ-ಇಲ್ಲಿ ನಿಂತು, ಕುಳಿತು ಸಾಗುತ್ತಿದ್ದರು. ಆದರೆ ಈಗ ಮಳೆಗಾಲ ಪ್ರಾರಂಭವಾಗಿದೆ ಇದರಿಂದ ಜನರ ಪರಿಸ್ಥಿತಿ ಹೈರಾಣಗುತ್ತಿದೆ. ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಲ್ಲ, ಚಾಹದ ಅಂಗಡಿಯಲ್ಲಿ ಚಾಹ ಕುಡಿದರೆ ಮಾತ್ರ ನೀರು ಕುಡಿಯಲು ಕೊಡುತ್ತಾರೆ. ಈ ಬಸ್ ನಿಲ್ದಾಣದಲ್ಲಿ ಕುಳಿತು ಕೊಳ್ಳಲು ಬಿಡಿ ನಿಂತುಕೊಳ್ಳಲು ವ್ಯವಸ್ಥೆಯಿಲ್ಲ ಎಂದು ಪ್ರಯಾಣಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧಪಟ್ಟ ಇಲಾಖೆಯವರು, ಶಾಸಕರು ಗುತ್ತಿಗೆ ಹಿಡಿದಂತ ಗುತ್ತಿಗೆದಾರ ಈ ಕಡೆ ಸ್ವಲ್ಪ ಲಕ್ಷ್ಯವಹಿಸಿದರೆ ಪ್ರಯಾಣಿಕರು ಸುರಕ್ಷಿತವಾಗಿ ಮಳೆಗಾಲವನ್ನು ಕಳೆಯಬಹುದು.
ವರದಿ : ಮಹಾಂತೇಶ ಹಾದಿಮನಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago