ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಅವರ ತಂಡ ಒಬ್ಬ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿದಿನದಂತೆ ಮುಂಜಾನೆ 4 ಗಂಟೆಗೆ ಅಂಗಡಿ ತೆರೆದು ಪ್ರಯಾಣಿಕರಿಗೆ ಸೇವೆ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಯುವಕನ ಬಳಿ ದೇವನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ರಾಕೇಶ್ ಮತ್ತು ಅವರ ತಂಡ ಬಂದಿದ್ದಾರೆ. “ಇಷ್ಟು ಬೇಗ ಅಂಗಡಿ ಏಕೆ ತೆರೆದಿದ್ದೀಯ?” ಎಂದು ಪ್ರಶ್ನಿಸಿದ ಪೊಲೀಸರು, ಮಾತಿನಲ್ಲೇ ನಿಲ್ಲದೆ ಆತನನ್ನು ಹೊರಗೆಳೆದು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹಲ್ಲೆ ನಡೆಯುತ್ತಿದ್ದಾಗ ಯುವಕ “ನನ್ನ ಹೊಡೆಯಬೇಡಿ ಸರ್, ಇನ್ನು ಮುಂದೆ ಅಂಗಡಿ ತೆರೆಯುವುದಿಲ್ಲ” ಎಂದು ಬೇಡಿಕೊಂಡಿದ್ದರೂ, ಪೊಲೀಸರು ದಯೆ ತೋರಿಲ್ಲ ಎನ್ನಲಾಗಿದೆ. ಈ ದೃಶ್ಯವನ್ನು ಕಂಡ ಗ್ರಾಹಕರು ಬೆಚ್ಚಿಬಿದ್ದಿದ್ದು, ಪೊಲೀಸರ ವರ್ತನೆಯನ್ನು ಖಂಡಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಅದು ವೈರಲ್ ಆಗಿದೆ.
ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಮುಂಜಾನೆ ಚಹಾ ಸಿಗುವುದು ಅಗತ್ಯ ಸೇವೆಯಂತೆ ಇರುವ ಸಂದರ್ಭದಲ್ಲಿ, ಬಡ ಯುವಕನ ಮೇಲೆ ಇಂತಹ ಕ್ರೂರ ವರ್ತನೆ ನಡೆಸಿರುವುದು ಪ್ರಶ್ನೆಗಳನ್ನು ಎಬ್ಬಿಸಿದೆ. ನಿಯಮ ಉಲ್ಲಂಘನೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.
ಈ ಘಟನೆ ಪೊಲೀಸ್ ಇಲಾಖೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಇನ್ನೂ ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಜನರು ವಿಡಿಯೋ ಹಂಚಿಕೊಂಡು, ಹಿರಿಯ ಅಧಿಕಾರಿಗಳಿಗೆ ಟ್ಯಾಗ್ ಮಾಡಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…