ಧರ್ಮಸ್ಥಳ: ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆದಿದ್ದು, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಶೋಧ ಕಾರ್ಯಾಚರಣೆಗೆ ಇನ್ನಷ್ಟು ವೇಗ ನೀಡಿದೆ.
ಇಂದು ದೂರುದಾರನ ಸೂಚನೆಯ ಮೇರೆಗೆ ಏಳನೇ ಹಾಗೂ ಎಂಟನೇ ಪಾಯಿಂಟ್ಗಳಲ್ಲಿ ತನಿಖೆ ನಡೆದಿದ್ದು, ಪ್ರಮುಖ ಸೂಚನೆಗಳು ಲಭ್ಯವಾಗಿವೆ. ನೇತ್ರಾವತಿ ನದಿಯ ಸಮೀಪದಲ್ಲಿರುವ ಏಳನೇ ಪಾಯಿಂಟ್ನಲ್ಲಿ ಅಧಿಕಾರಿಗಳು ಮಿನಿ ಅರ್ಥ್ ಮೂವರ್ ಸಹಾಯದಿಂದ ಸುಮಾರು ಎಂಟು ಅಡಿ ಮಣ್ಣನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಮಣ್ಣಿನ ಅಡಿಯಲ್ಲಿ ಒಂದು ಕಪ್ಪುಬಣ್ಣದ ವಸ್ತ್ರ (ಕರವಸ್ತ್ರ) ಪತ್ತೆಯಾಗಿದೆ.
ಪತ್ತೆಯಾದ ವಸ್ತುವನ್ನು ಎಸ್ಐಟಿ ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದು, ಪತ್ತೆದಾರಿ ಶ್ವಾನದ ಸಹಾಯದಿಂದ ಅಧ್ಯಯನ ನಡೆಸಿದ ನಂತರ ಎಫ್ಎಸ್ಎಲ್ (ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯ) ತಜ್ಞರ ಪರಿಶೀಲನೆಗೆ ಕಳಿಸಿದ್ದಾರೆ. ಈ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಯಿತೇ ಎಂಬುದನ್ನು ಮುಂದೆ ತಜ್ಞರ ವರದಿ ಸ್ಪಷ್ಟಪಡಿಸಲಿದೆ.
ಮತ್ತೊಂದೆಡೆ, ಇದೇ ಏಳನೇ ಪಾಯಿಂಟ್ನಿಂದ ಕೆಲವು ಮೀಟರ್ ದೂರದಲ್ಲಿರುವ ನೇತ್ರಾವತಿ ನದಿಯ ಮತ್ತೊಂದು ತಟದಲ್ಲಿಯೂ ಶೋಧ ಕಾರ್ಯ ನಡೆಯಿತು. ಆದರೆ ಸುಮಾರು ಆರು ಅಡಿ ಮಣ್ಣು ಅಗೆದರೂ ಅಲ್ಲಿ ಯಾವುದೇ ಅಸ್ಥಿಪಂಜರ ಅಥವಾ ಸಾಮಗ್ರಿಗಳು ಪತ್ತೆಯಾಗಿಲ್ಲ. ಹೀಗಾಗಿ, ಅಧಿಕಾರಿಗಳು ಆ ಸ್ಥಳದಲ್ಲಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವೊಂದು ಪ್ರಮುಖ ತಾಣಗಳಲ್ಲಿ ಶೋಧ ಕಾರ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಎಸ್ಐಟಿ ತಂಡ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರೆಸುತ್ತಿದೆ.
ಪರಿಸ್ಥಿತಿ ಇದೀಗ ಗಂಭೀರ ಹಂತಕ್ಕೆ ತಲುಪಿದ್ದು, ಈ ಪ್ರಕರಣದ ನಿಜಾಂಶ ಬಹುತೇಕ ದಿನಗಳಲ್ಲಿ ಬೆಳಕಿಗೆ ಬರುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…