ಧರ್ಮಸ್ಥಳ: ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆದಿದ್ದು, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಶೋಧ ಕಾರ್ಯಾಚರಣೆಗೆ ಇನ್ನಷ್ಟು ವೇಗ ನೀಡಿದೆ.
ಇಂದು ದೂರುದಾರನ ಸೂಚನೆಯ ಮೇರೆಗೆ ಏಳನೇ ಹಾಗೂ ಎಂಟನೇ ಪಾಯಿಂಟ್ಗಳಲ್ಲಿ ತನಿಖೆ ನಡೆದಿದ್ದು, ಪ್ರಮುಖ ಸೂಚನೆಗಳು ಲಭ್ಯವಾಗಿವೆ. ನೇತ್ರಾವತಿ ನದಿಯ ಸಮೀಪದಲ್ಲಿರುವ ಏಳನೇ ಪಾಯಿಂಟ್ನಲ್ಲಿ ಅಧಿಕಾರಿಗಳು ಮಿನಿ ಅರ್ಥ್ ಮೂವರ್ ಸಹಾಯದಿಂದ ಸುಮಾರು ಎಂಟು ಅಡಿ ಮಣ್ಣನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಮಣ್ಣಿನ ಅಡಿಯಲ್ಲಿ ಒಂದು ಕಪ್ಪುಬಣ್ಣದ ವಸ್ತ್ರ (ಕರವಸ್ತ್ರ) ಪತ್ತೆಯಾಗಿದೆ.
ಪತ್ತೆಯಾದ ವಸ್ತುವನ್ನು ಎಸ್ಐಟಿ ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದು, ಪತ್ತೆದಾರಿ ಶ್ವಾನದ ಸಹಾಯದಿಂದ ಅಧ್ಯಯನ ನಡೆಸಿದ ನಂತರ ಎಫ್ಎಸ್ಎಲ್ (ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯ) ತಜ್ಞರ ಪರಿಶೀಲನೆಗೆ ಕಳಿಸಿದ್ದಾರೆ. ಈ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಯಿತೇ ಎಂಬುದನ್ನು ಮುಂದೆ ತಜ್ಞರ ವರದಿ ಸ್ಪಷ್ಟಪಡಿಸಲಿದೆ.
ಮತ್ತೊಂದೆಡೆ, ಇದೇ ಏಳನೇ ಪಾಯಿಂಟ್ನಿಂದ ಕೆಲವು ಮೀಟರ್ ದೂರದಲ್ಲಿರುವ ನೇತ್ರಾವತಿ ನದಿಯ ಮತ್ತೊಂದು ತಟದಲ್ಲಿಯೂ ಶೋಧ ಕಾರ್ಯ ನಡೆಯಿತು. ಆದರೆ ಸುಮಾರು ಆರು ಅಡಿ ಮಣ್ಣು ಅಗೆದರೂ ಅಲ್ಲಿ ಯಾವುದೇ ಅಸ್ಥಿಪಂಜರ ಅಥವಾ ಸಾಮಗ್ರಿಗಳು ಪತ್ತೆಯಾಗಿಲ್ಲ. ಹೀಗಾಗಿ, ಅಧಿಕಾರಿಗಳು ಆ ಸ್ಥಳದಲ್ಲಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವೊಂದು ಪ್ರಮುಖ ತಾಣಗಳಲ್ಲಿ ಶೋಧ ಕಾರ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಎಸ್ಐಟಿ ತಂಡ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರೆಸುತ್ತಿದೆ.
ಪರಿಸ್ಥಿತಿ ಇದೀಗ ಗಂಭೀರ ಹಂತಕ್ಕೆ ತಲುಪಿದ್ದು, ಈ ಪ್ರಕರಣದ ನಿಜಾಂಶ ಬಹುತೇಕ ದಿನಗಳಲ್ಲಿ ಬೆಳಕಿಗೆ ಬರುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…