ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವುದಾಗಿ ಕೇಳಿ ಬರುತ್ತಿರುವ ಸಂವೇದನಾಶೀಲ ಪ್ರಕರಣ ಸಂಬಂಧ, ಐದನೇ ದಿನವೂ ಅಸ್ಥಿ ಉತ್ಖನನ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಉತ್ಖನನದ ವೇಳೆ ದೂರು ನೀಡಿರುವ ವ್ಯಕ್ತಿಯ ಹಠಾತ್ ನಡೆ ಹೊಸ ಸಂಶಯ ಮತ್ತು ಕುತೂಹಲಕ್ಕೆ ಕಾರಣವಾಗಿದ್ದಾನೆ.
ಸಿಎಂ ನೇತೃತ್ವದ ವಿಶೇಷ ತನಿಖಾ ತಂಡ (SIT) ಈಗಾಗಲೇ 10 ಪಾಯಿಂಟ್ಗಳಲ್ಲಿ ಅಸ್ಥಿ ಶೋಧ ನಡೆಸಿದ್ದು, ಇಂದಿನಿಂದ 11ನೇ, 12ನೇ ಹಾಗೂ 13ನೇ ಪಾಯಿಂಟ್ಗಳಲ್ಲಿ ಶೋಧ ಆರಂಭಿಸಲು ತಯಾರಿ ನಡೆದಿದೆ. ವಿಶೇಷವಾಗಿ 12 ಮತ್ತು 13ನೇ ಪಾಯಿಂಟ್ಗಳಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಶವ ಹೂತಿದ್ದೇನೆ ಎಂದು ದೂರುದಾರ ಹಿಂದಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದ ಹಿನ್ನೆಲೆಯಲ್ಲಿ, ಈ ಸ್ಥಳಗಳ ಪರಿಶೀಲನೆ ಹೆಚ್ಚು ಮಹತ್ವದಾಗಿ ಪರಿಗಣಿಸಲಾಗಿದೆ.
ಆದರೆ ಉತ್ಖನನದ ಸಮಯದಲ್ಲಿ ದೂರುದಾರನೊಬ್ಬನ ಅನುಮಾನಾಸ್ಪದ ನಡೆ ಎಲ್ಲರ ಗಮನ ಸೆಳೆದಿದೆ. ಅಧಿಕಾರಿಗಳು 11ನೇ ಪಾಯಿಂಟ್ಗೆ ಕರೆದೊಯ್ಯುವ ಬದಲು, ನೇತ್ರಾವತಿ ನದಿಯ ಸಮೀಪದ ಒಂದು ಅನಾಮಿಕ ಗುಡ್ಡದ ಕಡೆಗೆ ದೂರುದಾರನನ್ನು ಕರೆದೊಯ್ದಿರುವುದು ಹೊಸ ಶಂಕೆಗಳಿಗೆ ದಾರಿತೊರೆದಿದೆ.
ಇದುವರೆಗೆ ನಡೆದ 10 ಪಾಯಿಂಟ್ಗಳ ಉತ್ಖನನದಲ್ಲಿ ಕೇವಲ ಆರನೇ ಪಾಯಿಂಟ್ನಲ್ಲಿಯೇ ಅಸ್ಥಿಗಳು ಪತ್ತೆಯಾಗಿವೆ. ಇಲ್ಲಿಯೇ ತಲೆಬುರುಡೆ ಸೇರಿದಂತೆ ಹಲವು ಮೂಳೆಗಳು ಪತ್ತೆಯಾಗಿದ್ದು, ಈ ಅಸ್ಥಿಗಳನ್ನು ತಕ್ಷಣ ಎಫ್ಎಸ್ಎಲ್ (FSL)ಗೆ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಈ ಮೂಳೆಗಳು ಕನಿಷ್ಠ 15 ವರ್ಷಕ್ಕೂ ಹಳೆಯದಾಗಿರಬಹುದೆಂಬ ಅಂದಾಜು ಲಭಿಸಿದೆ.
ಇಡೀ ತನಿಖೆಯು ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದ್ದು, ಶವ ಹೂತು ಪ್ರಕರಣ ಸತ್ಯಕ್ಕೂ ಕೇವಲ ಕಾಲದ ಪ್ರಶ್ನೆಯಾಗಿರಬಹುದು ಎಂಬ ನಿರೀಕ್ಷೆಯಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…