ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವುದಾಗಿ ಕೇಳಿ ಬರುತ್ತಿರುವ ಸಂವೇದನಾಶೀಲ ಪ್ರಕರಣ ಸಂಬಂಧ, ಐದನೇ ದಿನವೂ ಅಸ್ಥಿ ಉತ್ಖನನ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಉತ್ಖನನದ ವೇಳೆ ದೂರು ನೀಡಿರುವ ವ್ಯಕ್ತಿಯ ಹಠಾತ್ ನಡೆ ಹೊಸ ಸಂಶಯ ಮತ್ತು ಕುತೂಹಲಕ್ಕೆ ಕಾರಣವಾಗಿದ್ದಾನೆ.
ಸಿಎಂ ನೇತೃತ್ವದ ವಿಶೇಷ ತನಿಖಾ ತಂಡ (SIT) ಈಗಾಗಲೇ 10 ಪಾಯಿಂಟ್ಗಳಲ್ಲಿ ಅಸ್ಥಿ ಶೋಧ ನಡೆಸಿದ್ದು, ಇಂದಿನಿಂದ 11ನೇ, 12ನೇ ಹಾಗೂ 13ನೇ ಪಾಯಿಂಟ್ಗಳಲ್ಲಿ ಶೋಧ ಆರಂಭಿಸಲು ತಯಾರಿ ನಡೆದಿದೆ. ವಿಶೇಷವಾಗಿ 12 ಮತ್ತು 13ನೇ ಪಾಯಿಂಟ್ಗಳಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಶವ ಹೂತಿದ್ದೇನೆ ಎಂದು ದೂರುದಾರ ಹಿಂದಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದ ಹಿನ್ನೆಲೆಯಲ್ಲಿ, ಈ ಸ್ಥಳಗಳ ಪರಿಶೀಲನೆ ಹೆಚ್ಚು ಮಹತ್ವದಾಗಿ ಪರಿಗಣಿಸಲಾಗಿದೆ.
ಆದರೆ ಉತ್ಖನನದ ಸಮಯದಲ್ಲಿ ದೂರುದಾರನೊಬ್ಬನ ಅನುಮಾನಾಸ್ಪದ ನಡೆ ಎಲ್ಲರ ಗಮನ ಸೆಳೆದಿದೆ. ಅಧಿಕಾರಿಗಳು 11ನೇ ಪಾಯಿಂಟ್ಗೆ ಕರೆದೊಯ್ಯುವ ಬದಲು, ನೇತ್ರಾವತಿ ನದಿಯ ಸಮೀಪದ ಒಂದು ಅನಾಮಿಕ ಗುಡ್ಡದ ಕಡೆಗೆ ದೂರುದಾರನನ್ನು ಕರೆದೊಯ್ದಿರುವುದು ಹೊಸ ಶಂಕೆಗಳಿಗೆ ದಾರಿತೊರೆದಿದೆ.
ಇದುವರೆಗೆ ನಡೆದ 10 ಪಾಯಿಂಟ್ಗಳ ಉತ್ಖನನದಲ್ಲಿ ಕೇವಲ ಆರನೇ ಪಾಯಿಂಟ್ನಲ್ಲಿಯೇ ಅಸ್ಥಿಗಳು ಪತ್ತೆಯಾಗಿವೆ. ಇಲ್ಲಿಯೇ ತಲೆಬುರುಡೆ ಸೇರಿದಂತೆ ಹಲವು ಮೂಳೆಗಳು ಪತ್ತೆಯಾಗಿದ್ದು, ಈ ಅಸ್ಥಿಗಳನ್ನು ತಕ್ಷಣ ಎಫ್ಎಸ್ಎಲ್ (FSL)ಗೆ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಈ ಮೂಳೆಗಳು ಕನಿಷ್ಠ 15 ವರ್ಷಕ್ಕೂ ಹಳೆಯದಾಗಿರಬಹುದೆಂಬ ಅಂದಾಜು ಲಭಿಸಿದೆ.
ಇಡೀ ತನಿಖೆಯು ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದ್ದು, ಶವ ಹೂತು ಪ್ರಕರಣ ಸತ್ಯಕ್ಕೂ ಕೇವಲ ಕಾಲದ ಪ್ರಶ್ನೆಯಾಗಿರಬಹುದು ಎಂಬ ನಿರೀಕ್ಷೆಯಿದೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…