ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವುದಾಗಿ ಕೇಳಿ ಬರುತ್ತಿರುವ ಸಂವೇದನಾಶೀಲ ಪ್ರಕರಣ ಸಂಬಂಧ, ಐದನೇ ದಿನವೂ ಅಸ್ಥಿ ಉತ್ಖನನ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಉತ್ಖನನದ ವೇಳೆ ದೂರು ನೀಡಿರುವ ವ್ಯಕ್ತಿಯ ಹಠಾತ್ ನಡೆ ಹೊಸ ಸಂಶಯ ಮತ್ತು ಕುತೂಹಲಕ್ಕೆ ಕಾರಣವಾಗಿದ್ದಾನೆ.
ಸಿಎಂ ನೇತೃತ್ವದ ವಿಶೇಷ ತನಿಖಾ ತಂಡ (SIT) ಈಗಾಗಲೇ 10 ಪಾಯಿಂಟ್ಗಳಲ್ಲಿ ಅಸ್ಥಿ ಶೋಧ ನಡೆಸಿದ್ದು, ಇಂದಿನಿಂದ 11ನೇ, 12ನೇ ಹಾಗೂ 13ನೇ ಪಾಯಿಂಟ್ಗಳಲ್ಲಿ ಶೋಧ ಆರಂಭಿಸಲು ತಯಾರಿ ನಡೆದಿದೆ. ವಿಶೇಷವಾಗಿ 12 ಮತ್ತು 13ನೇ ಪಾಯಿಂಟ್ಗಳಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಶವ ಹೂತಿದ್ದೇನೆ ಎಂದು ದೂರುದಾರ ಹಿಂದಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದ ಹಿನ್ನೆಲೆಯಲ್ಲಿ, ಈ ಸ್ಥಳಗಳ ಪರಿಶೀಲನೆ ಹೆಚ್ಚು ಮಹತ್ವದಾಗಿ ಪರಿಗಣಿಸಲಾಗಿದೆ.
ಆದರೆ ಉತ್ಖನನದ ಸಮಯದಲ್ಲಿ ದೂರುದಾರನೊಬ್ಬನ ಅನುಮಾನಾಸ್ಪದ ನಡೆ ಎಲ್ಲರ ಗಮನ ಸೆಳೆದಿದೆ. ಅಧಿಕಾರಿಗಳು 11ನೇ ಪಾಯಿಂಟ್ಗೆ ಕರೆದೊಯ್ಯುವ ಬದಲು, ನೇತ್ರಾವತಿ ನದಿಯ ಸಮೀಪದ ಒಂದು ಅನಾಮಿಕ ಗುಡ್ಡದ ಕಡೆಗೆ ದೂರುದಾರನನ್ನು ಕರೆದೊಯ್ದಿರುವುದು ಹೊಸ ಶಂಕೆಗಳಿಗೆ ದಾರಿತೊರೆದಿದೆ.
ಇದುವರೆಗೆ ನಡೆದ 10 ಪಾಯಿಂಟ್ಗಳ ಉತ್ಖನನದಲ್ಲಿ ಕೇವಲ ಆರನೇ ಪಾಯಿಂಟ್ನಲ್ಲಿಯೇ ಅಸ್ಥಿಗಳು ಪತ್ತೆಯಾಗಿವೆ. ಇಲ್ಲಿಯೇ ತಲೆಬುರುಡೆ ಸೇರಿದಂತೆ ಹಲವು ಮೂಳೆಗಳು ಪತ್ತೆಯಾಗಿದ್ದು, ಈ ಅಸ್ಥಿಗಳನ್ನು ತಕ್ಷಣ ಎಫ್ಎಸ್ಎಲ್ (FSL)ಗೆ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಈ ಮೂಳೆಗಳು ಕನಿಷ್ಠ 15 ವರ್ಷಕ್ಕೂ ಹಳೆಯದಾಗಿರಬಹುದೆಂಬ ಅಂದಾಜು ಲಭಿಸಿದೆ.
ಇಡೀ ತನಿಖೆಯು ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದ್ದು, ಶವ ಹೂತು ಪ್ರಕರಣ ಸತ್ಯಕ್ಕೂ ಕೇವಲ ಕಾಲದ ಪ್ರಶ್ನೆಯಾಗಿರಬಹುದು ಎಂಬ ನಿರೀಕ್ಷೆಯಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…