Latest

ಧರ್ಮಸ್ಥಳ ಶವ ಹೂತು ಪ್ರಕರಣ: ಎಸ್‌ಐಟಿಗೆ ಮತ್ತಷ್ಟು ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ (SIT) ಮತ್ತೆ 9 ಮಂದಿ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಡಿಜಿ ಹಾಗೂ ಐಜಿಪಿ ಡಾ. ಎಂ.ಎ. ಸಲೀಂ ಅವರು ಹೊಸ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಪ್ರಕರಣದ ತನಿಖೆಗೆ ಸಂಬಂಧಿಸಿ ಮೂವರು ಉನ್ನತ ಪೊಲೀಸ್ ಅಧಿಕಾರಿಗಳ ನೇಮಕದಿಂದ ಆರಂಭವಾಗಿ, ಇದೀಗ ತನಿಖೆಯ ಅಗತ್ಯತೆ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ಕಾರ್ಯನಿರ್ವಹಣೆಗೆ ನಿಯೋಜಿಸಲಾಗಿತ್ತು. ಇದೀಗ ಈ ಪಟ್ಟಿಗೆ ಇನ್ನೂ 9 ಮಂದಿ ಅಧಿಕಾರಿಗಳು ಸೇರ್ಪಡೆಯಾಗಿದ್ದಾರೆ.

ನಿಯೋಜಿಸಲಾದ ನೌಕರರ ವಿವರ ಹೀಗಿದೆ:

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಲಾರೆನ್ಸ್ ಸೆನ್

ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಪುನೀತ್

ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮನೋಹರ

ವಿಟ್ಲ ಠಾಣೆಯ ಪೋಲೀಸ್ ಕಾನ್‌ಸ್ಟೆಬಲ್ ಮನೋಜ್

ಪುಂಜಾಲಕಟ್ಟೆ ಠಾಣೆಯ ಪೋಲೀಸ್ ಕಾನ್‌ಸ್ಟೆಬಲ್ ಸಂದೀಪ್

ಉಡುಪಿ ಸಿಎಸ್‌ಪಿ ಠಾಣೆಯ ಪೋಲೀಸ್ ಕಾನ್‌ಸ್ಟೆಬಲ್ ಲೋಕೇಶ್

ಹೊನ್ನಾವರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಸತೀಶ್ ನಾಯ್ಕ

ಮಂಗಳೂರು ಎಫ್‌ಎಮ್‌ಎಸ್ ದಳದ ಹೆಡ್ ಕಾನ್‌ಸ್ಟೆಬಲ್ ಜಯರಾಮೇಗೌಡ

ಮಂಗಳೂರು ಎಫ್‌ಎಮ್‌ಎಸ್ ದಳದ ಹೆಡ್ ಕಾನ್‌ಸ್ಟೆಬಲ್ ಬಾಲಕೃಷ್ಣ ಗೌಡ

ಇವರು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್‌ಐಟಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ.

ಪ್ರಕರಣದ ನಿಜಾಂಶವನ್ನು ಪತ್ತೆ ಹಚ್ಚಲು ಬೃಹತ್ ಮಟ್ಟದಲ್ಲಿ ಪರಿಶೋಧನೆ ನಡೆಯುತ್ತಿದ್ದು, ಇದಕ್ಕಾಗಿ ಪೊಲೀಸರು ಇದೀಗ ಧರ್ಮಸ್ಥಳದಲ್ಲಿ ಹಲವು ಸ್ಥಳಗಳಲ್ಲಿ ಉತ್ಖನನ ಕಾರ್ಯರೂಪದಲ್ಲಿ ತೊಡಗಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಶಾಖೆಗಳಿಂದ ಅಧಿಕಾರಿಗಳನ್ನು ಸೆಳೆದು ತರುವ ಮೂಲಕ ತನಿಖೆಗೆ ಚುರುಕುಗೊಳಿಸಲಾಗುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

15 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago