ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ (SIT) ಮತ್ತೆ 9 ಮಂದಿ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಡಿಜಿ ಹಾಗೂ ಐಜಿಪಿ ಡಾ. ಎಂ.ಎ. ಸಲೀಂ ಅವರು ಹೊಸ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಪ್ರಕರಣದ ತನಿಖೆಗೆ ಸಂಬಂಧಿಸಿ ಮೂವರು ಉನ್ನತ ಪೊಲೀಸ್ ಅಧಿಕಾರಿಗಳ ನೇಮಕದಿಂದ ಆರಂಭವಾಗಿ, ಇದೀಗ ತನಿಖೆಯ ಅಗತ್ಯತೆ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ಕಾರ್ಯನಿರ್ವಹಣೆಗೆ ನಿಯೋಜಿಸಲಾಗಿತ್ತು. ಇದೀಗ ಈ ಪಟ್ಟಿಗೆ ಇನ್ನೂ 9 ಮಂದಿ ಅಧಿಕಾರಿಗಳು ಸೇರ್ಪಡೆಯಾಗಿದ್ದಾರೆ.
ನಿಯೋಜಿಸಲಾದ ನೌಕರರ ವಿವರ ಹೀಗಿದೆ:
ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್ ಸೆನ್
ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಪುನೀತ್
ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಮನೋಹರ
ವಿಟ್ಲ ಠಾಣೆಯ ಪೋಲೀಸ್ ಕಾನ್ಸ್ಟೆಬಲ್ ಮನೋಜ್
ಪುಂಜಾಲಕಟ್ಟೆ ಠಾಣೆಯ ಪೋಲೀಸ್ ಕಾನ್ಸ್ಟೆಬಲ್ ಸಂದೀಪ್
ಉಡುಪಿ ಸಿಎಸ್ಪಿ ಠಾಣೆಯ ಪೋಲೀಸ್ ಕಾನ್ಸ್ಟೆಬಲ್ ಲೋಕೇಶ್
ಹೊನ್ನಾವರ ಠಾಣೆಯ ಹೆಡ್ ಕಾನ್ಸ್ಟೆಬಲ್ ಸತೀಶ್ ನಾಯ್ಕ
ಮಂಗಳೂರು ಎಫ್ಎಮ್ಎಸ್ ದಳದ ಹೆಡ್ ಕಾನ್ಸ್ಟೆಬಲ್ ಜಯರಾಮೇಗೌಡ
ಮಂಗಳೂರು ಎಫ್ಎಮ್ಎಸ್ ದಳದ ಹೆಡ್ ಕಾನ್ಸ್ಟೆಬಲ್ ಬಾಲಕೃಷ್ಣ ಗೌಡ
ಇವರು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್ಐಟಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ.
ಪ್ರಕರಣದ ನಿಜಾಂಶವನ್ನು ಪತ್ತೆ ಹಚ್ಚಲು ಬೃಹತ್ ಮಟ್ಟದಲ್ಲಿ ಪರಿಶೋಧನೆ ನಡೆಯುತ್ತಿದ್ದು, ಇದಕ್ಕಾಗಿ ಪೊಲೀಸರು ಇದೀಗ ಧರ್ಮಸ್ಥಳದಲ್ಲಿ ಹಲವು ಸ್ಥಳಗಳಲ್ಲಿ ಉತ್ಖನನ ಕಾರ್ಯರೂಪದಲ್ಲಿ ತೊಡಗಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಶಾಖೆಗಳಿಂದ ಅಧಿಕಾರಿಗಳನ್ನು ಸೆಳೆದು ತರುವ ಮೂಲಕ ತನಿಖೆಗೆ ಚುರುಕುಗೊಳಿಸಲಾಗುತ್ತಿದೆ.
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…