ಧರ್ಮಸ್ಥಳ: ಪ್ರಖ್ಯಾತ ಧಾರ್ಮಿಕ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತು ಪ್ರಕರಣ ಸಂಬಂಧ ಸತತ ನಾಲ್ಕನೇ ದಿನವೂ ಶೋಧ ಕಾರ್ಯ ತೀವ್ರವಾಗಿಯೇ ಮುಂದುವರಿದಿದ್ದು, ಇಂದು ತನಿಖೆಗೆ ಮಹತ್ವದ ತಿರುವು ಸಿಕ್ಕಿದೆ.
ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ಧರ್ಮಸ್ಥಳದ ಸೈಟ್ ನಂ.1ರಲ್ಲಿ ಆಳದಂತೆ ತೀವ್ರ ಪರಿಶೋಧನೆ ನಡೆಸಿದ್ದು, ಅನೇಕ ಕುತೂಹಲ ಕೆರಳಿಸುವ ವಸ್ತುಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ಪ್ರಮುಖವಾಗಿ 2.5 ಅಡಿ ಆಳದಲ್ಲಿ ಪತ್ತೆಯಾದ ಕೆಂಪು ಬಣ್ಣದ ರವಿಕೆ, ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಬೆಳಕು ಕಂಡಿವೆ.
ಎಸ್ಐಟಿ ಅಧಿಕೃತವಾಗಿ ಈ ವಸ್ತುಗಳ ಪತ್ತೆ ಬಗ್ಗೆ ದೃಢೀಕರಣ ನೀಡಿದ್ದು, ಇವು ಪ್ರಕರಣಕ್ಕೆ ಹೊಸ ಬೆಳಕು ತರಲಿರುವ ಸಾಧ್ಯತೆ ಹೆಚ್ಚಾಗಿದೆ. ಶವ ಹೂತು ಆರೋಪಗಳ ಹಿನ್ನೆಲೆಯಲ್ಲಿಯೇ ಇಂತಹ ದಾಖಲೆ ಅಥವಾ ವ್ಯಕ್ತಿ ಗುರುತಿಸುವ ಸಾಮಗ್ರಿಗಳು ಪತ್ತೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹತ್ತಿಕ್ಕಿದೆ.
ಈ ಬೆಳವಣಿಗೆಯೊಂದಿಗೆ, ಧರ್ಮಸ್ಥಳ ಶವ ಹೂತು ಪ್ರಕರಣವು ನವ ಸುಳಿವಿನ ದಿಕ್ಕಿನಲ್ಲಿ ಸಾಗಲಿದ್ದು, ತನಿಖೆಗೆ ದೊಡ್ಡ ತಿರುವು ಸಿಕ್ಕಂತಾಗಿದೆ. ಮುಂದಿನ ದಿನಗಳಲ್ಲಿ ಇವುಗಳ ವೈಜ್ಞಾನಿಕ ಪರೀಕ್ಷೆ, ಡಿಎನ್ಎ ವಿಶ್ಲೇಷಣೆ ಮೂಲಕ ಆರೋಪಿ ಅಥವಾ ಶವದ ಗುರುತು ಪತ್ತೆಹಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಪೊಲೀಸ್ ಭದ್ರತೆ ಮತ್ತಷ್ಟು ಗಟ್ಟಿ ಮಾಡಲಾಗಿದ್ದು, ಸ್ಥಳೀಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಸೀಮಿತ ಪ್ರವೇಶವಿದೆ. ಇನ್ನಷ್ಟು ಮಾಹಿತಿ ಬಹಿರಂಗವಾಗುವವರೆಗೆ ತನಿಖಾ ವರದಿಯ ನಿರೀಕ್ಷೆಯಲ್ಲಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…