ಬೆಳ್ತಂಗಡಿ, ಆ.7 – ಧರ್ಮಸ್ಥಳ ಶವ ಹೂತು ಪ್ರಕರಣದಲ್ಲಿ ಇಂದು (ಬುಧವಾರ) ಯಾವುದೇ ಶೋಧ ಕಾರ್ಯ ನಡೆದಿಲ್ಲ. ವಿಶೇಷ ತನಿಖಾ ತಂಡ (ಎಸ್ಐಟಿ)ದ ನೇತೃತ್ವದಲ್ಲಿ ದಿನದಳು ಶೋಧ ಕಾರ್ಯ ನಡೆಯುತ್ತಿದ್ದ ಪಾಯಿಂಟ್ ನಂ.13 ರಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡದೆ ಹಿಂದಕ್ಕೆ ಹೂಂಡಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ಸ್ಥಳ ಪರಿಶೀಲನೆ ಕಾರ್ಯ ನಡೆಸಲಾಗುತ್ತೆ ಎಂಬ ನಿರೀಕ್ಷೆ ಇದ್ದರೂ, ಎಸ್ಐಟಿ ಕಚೇರಿಯಿಂದ ಅರಣ್ಯ, ಕಂದಾಯ ಇಲಾಖೆ ಹಾಗೂ ಸೋಕೋ ತಂಡದ ಅಧಿಕಾರಿಗಳು ಶೋಧ ಸ್ಥಳಕ್ಕೆ ತೆರಳದೆ ದೈನಂದಿನ ಕಾರ್ಯ ನಿರ್ವಹಣೆಗೆ ಮರುಳುಹೋಗಿದ್ದಾರೆ. ಇದರೊಂದಿಗೇ ಶೋಧ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಂತಾಗಿದೆ.
ಇತ್ತ, ಎಸ್ಐಟಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ತನಿಖೆಯ ಗಮನ ಈಗ ಸಾಕ್ಷ್ಯ ಪರಿಕರಗಳ ಪರಿಶೀಲನೆಯತ್ತ ಹರಿಯುತ್ತಿದೆ. ಕಳೆದ ಎಂಟು ದಿನಗಳಿಂದ ನಡೆದ ಶೋಧ ಕಾರ್ಯಗಳಲ್ಲಿ ಸಿಕ್ಕಿದ್ದ ವಿಡಿಯೋ, ಫೋಟೋ ಹಾಗೂ ಅಸ್ತಿಪಂಜರದ ಪತ್ತೆಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ಸಂಬಂಧ ತಜ್ಞರ ಅಭಿಪ್ರಾಯ ಪಡೆಯುವ ಪ್ರಕ್ರಿಯೆಯೂ ಆರಂಭವಾಗಿದೆ.
ಮಧ್ಯಾಹ್ನದ ಹೊತ್ತಿನಲ್ಲಿ ಅಡಿಶನಲ್ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಅವರು ತಹಶೀಲ್ದಾರ್ ಕಚೇರಿಯಿಂದ ನೇರವಾಗಿ ಎಸ್ಐಟಿ ಕಚೇರಿಗೆ ತೆರಳದೆ, ಮೂರು ಗಂಟೆಗಳ ಕಾಲ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲ ಕಡತಗಳ ವಿಲೇವಾರಿ ಹಾಗೂ ಇತರ ಮಹತ್ವದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳ ನಿರೀಕ್ಷೆಯಿದ್ದು, ಮುಂದಿನ ದಿನಗಳಲ್ಲಿ ತಜ್ಞರ ಅಭಿಪ್ರಾಯದ ಆಧಾರದ ಮೇಲೆ ತನಿಖೆಗೆ ಹೊಸ ದಿಕ್ಕು ಸಿಗುವ ಸಾಧ್ಯತೆಯಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…