Latest

ಧರ್ಮಸ್ಥಳ ಶವ ಹೂತಿಟ್ಟ ಕೇಸ್: ಶಾಲಾ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಶಂಕೆ, ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ

ಧರ್ಮಸ್ಥಳ, ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ತಿಪಂಜರಗಳು ಮತ್ತು ಅನುಮಾನಾಸ್ಪದ ಶವಗಳ ಪ್ರಕರಣವು ಈಗ ಗಂಭೀರ ತಿರುವು ಪಡೆದಿದೆ. ಶಂಕಿತ ಸ್ಥಳದಲ್ಲಿ ವಿಶೇಷ ತನಿಖಾ ತಂಡ (SIT) ಈಗಾಗಲೇ ಪಾಯಿಂಟ್ ನಂಬರ್ 6ರಲ್ಲಿ ಮನುಷ್ಯನ ಮೂಳೆಗಳ ಸೆರೆಹಿಡಿದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅದು ಕೆಲವೊಂದು ವರ್ಷಗಳ ಹಿಂದಿನದ್ದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಬಾಲಕಿಯ ಶವವಿರಬಹುದೆಂದು ದೂರುದಾರನ ಸ್ಪೋಟಕ ಹೇಳಿಕೆ

ಈ ನಡುವೆ ಪ್ರಕರಣದ ಪ್ರಮುಖ ದೂರುದಾರನೊಬ್ಬ ನೀಡಿರುವ ಭಯಾನಕ ಹೇಳಿಕೆ ತನಿಖೆಗೆ ಹೊಸ ಬೆಳಕು ಚೆಲ್ಲಿದೆ. “ನಾನು 12ರಿಂದ 15 ವರ್ಷ ವಯಸ್ಸಿನ ಬಾಲಕಿಯ ಶವವನ್ನು ನೋಡಿದ್ದೆ. ಅವಳು ಶಾಲಾ ಸಮವಸ್ತ್ರದ ಶರ್ಟ್ ಧರಿಸಿದ್ದಳು. ಲಂಗ ಅಥವಾ ಒಳಉಡುಪು ಇರಲಿಲ್ಲ. ಕುತ್ತಿಗೆಗೆ ಹಿಸುಕಿದ ಗುರುತುಗಳು ಸ್ಪಷ್ಟವಾಗಿದ್ದವು. ಲೈಂಗಿಕ ದೌರ್ಜನ್ಯವಾಗಿದೆ ಎಂಬುದು ಸ್ಪಷ್ಟವಾಗಿತ್ತು,” ಎಂದು ಆ ವ್ಯಕ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಆ ಶವವನ್ನು ಹೂಳಲು ನನ್ನ ಬಳಿ ಗುಂಡಿ ಅಗೆಯುವಂತೆ ಹೇಳಲಾಗಿತ್ತು. ಶಾಲಾ ಬ್ಯಾಗ್‌ ಸಹ ಸೇರಿಸಿ ಹೂಳಲು ಸೂಚನೆ ನೀಡಲಾಯಿತೆ. ಆ ದೃಶ್ಯ ಇಂದಿಗೂ ನನ್ನ ಮನಸ್ಸಿನಿಂದ ಮಾಸಿಲ್ಲ,” ಎಂದು ಆತ ಭಾವುಕವಾಗಿ ಹೇಳಿದ್ದಾನೆ.

2010ರಲ್ಲಿ ನಾಪತ್ತೆಯಾದ ಶಾಲಾ ಬಾಲಕಿ?

ಈ ಹೇಳಿಕೆಯ ನಂತರ ಎಸ್‌ಐಟಿ ಅಧಿಕಾರಿಗಳು ಇದೀಗ ಶಾಲಾ ಬಾಲಕಿಯ ನಾಪತ್ತೆ ಪ್ರಕರಣಗಳತ್ತ ತಮ್ಮ ಗಮನ ಹರಿಸಿದ್ದು, ಧರ್ಮಸ್ಥಳ, ಕಲ್ಲೇರಿ ಹಾಗೂ ಸುತ್ತಮುತ್ತಲಿನ ಶಾಲೆಗಳಲ್ಲಿ 2010ರಲ್ಲಿ ಅಥವಾ ಅದಕ್ಕೂ ಮುಂಚೆ ನಾಪತ್ತೆಯಾಗಿದ್ದ ಬಾಲಕಿಯರ ಕುರಿತು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ಈ ಕುರಿತು ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನೂ ಪರಿಶೀಲಿಸಲಾಗುತ್ತಿದೆ.

ಎಸ್‌ಐಟಿ ಸಹಾಯವಾಣಿ – ಸಾರ್ವಜನಿಕ ಪ್ರತಿಕ್ರಿಯೆ ಭಾರೀ

ಈ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ಎಸ್‌ಐಟಿ ಕಳೆದ ಎರಡು ದಿನಗಳ ಹಿಂದೆ ಸಹಾಯವಾಣಿ (ಹೆಲ್ಪ್‌ಲೈನ್) ಆರಂಭಿಸಿದ್ದು, ಈಗಾಗಲೇ ನೂರಾರು ಕರೆಗಳು ಬಂದಿವೆ. ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಕರೆಗಳು ಬಂದಿದೆ.

ಹೆಚ್ಚಿನವರು ತನಿಖೆಯ ಪ್ರಗತಿ ಕುರಿತು ಮಾಹಿತಿ ಕೇಳುತ್ತಿದ್ದರೆ, ಕೆಲವರು ತಮ್ಮ ಅನುಮಾನಗಳ ಕುರಿತು ಸಲಹೆಗಳನ್ನು ಸಹ ನೀಡುತ್ತಿದ್ದಾರೆ. ಆದರೆ ಇತ್ತೀಚೆಗೆ ಯಾವುದೇ ಹೊಸ ಪ್ರಕರಣಗಳ ಬಗ್ಗೆ ನೇರ ದೂರುಗಳು ಬಂದಿಲ್ಲ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಮೇಲ್ಮಟ್ಟದ ತನಿಖೆ ನಿರೀಕ್ಷೆ

ಪ್ರಕರಣದ ಪ್ರಾಮುಖ್ಯತೆ ಮತ್ತು ಗಂಭೀರತೆಯ ಹಿನ್ನೆಲೆಯಲ್ಲಿ, ಮುಂಬರುವ ದಿನಗಳಲ್ಲಿ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ. ಶವಕ್ಕೆ ಸಂಬಂಧಿಸಿದ ಡಿಎನ್‌ಎ ಪರೀಕ್ಷೆಗಳು ಮತ್ತು 2010ರಲ್ಲಿ ನಾಪತ್ತೆಯಾಗಿದ್ದ ಬಾಲಕಿಯರ ದಾಖಲಾತಿಗಳು ಪ್ರಕರಣಕ್ಕೆ ತಿರುವು ತರುವ ಸಾಧ್ಯತೆಯಿದೆ.

ಇಡೀ ರಾಜ್ಯವೇ ಈ ಪ್ರಕರಣದ ತನಿಖೆಯತ್ತ ಕಣ್ಣಿಟ್ಟಿರುವ ಸಂದರ್ಭ, ನ್ಯಾಯ ಸಿಗುವವರೆಗೆ ಎಸ್‌ಐಟಿ ಕಾರ್ಯಚಟುವಟಿಕೆ ನಿರಂತರವಾಗಿ ಮುಂದುವರಿಯಲಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

20 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

20 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

20 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

20 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago