ಮಂಗಳೂರು: ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳ ಶವ ಹೂತು ಪ್ರಕರಣವು ಇದೀಗ ಹೊಸ ಹಂತಕ್ಕೆ ಕಾಲಿಡುತ್ತಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದ್ದು, ಈ ತಂಡ ನಾಳೆ (ಜುಲೈ 23) ಧರ್ಮಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಚಾಲನೆ ನೀಡಲಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಈ ವಿಶೇಷ ತಂಡ, ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಲಿದೆ. ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹಾಗೂ ಧರ್ಮಸ್ಥಳ ಠಾಣೆಯ ಇನ್ಸ್ಪೆಕ್ಟರ್ಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಪ್ರಕರಣದ ನಿಖರ ವಿವರಗಳನ್ನು ಪಡೆಯಲಿದ್ದಾರೆ.
ನಂತರ ಈ ಪ್ರಕರಣವನ್ನು ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರಿಸಲಾಗುತ್ತದೆ. ಈ ಮೂಲಕ, ಶವಗಳನ್ನು ಹೂತಿಟ್ಟಿದ್ದ ಶಂಕಿತ ಪ್ರಕರಣದ ಹಿನ್ನೆಲೆ, ಸಂಬಂಧಿತ ವ್ಯಕ್ತಿಗಳು ಹಾಗೂ ಹಿಂದಿನ ಎಲ್ಲ ವಿವರಗಳ ಬಗ್ಗೆ ಎಸ್ಐಟಿ ಸಂಪೂರ್ಣ ತನಿಖೆ ನಡೆಸಲಿದೆ.
ರಾಜ್ಯ ಸರ್ಕಾರದ ಈ ಕ್ರಮದಿಂದ ಪ್ರಕರಣದ ವಾಸ್ತವ ಸ್ಥಿತಿ ಬೆಳಕಿಗೆ ಬರುವ ನಿರೀಕ್ಷೆಯಿದೆ. ಸಾರ್ವಜನಿಕರ ಕುತೂಹಲಕ್ಕೂ ಇನ್ನು ಕೆಲವೇ ದಿನಗಳಲ್ಲಿ ಸ್ಪಷ್ಟತೆ ದೊರೆಯುವ ಸಾಧ್ಯತೆ ಇದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…