Latest

ಧರ್ಮಸ್ಥಳ ಶವ ಹೂತು ಪ್ರಕರಣ: SIT ತನಿಖೆಗೆ ತಮಿಳುನಾಡು ಕಾರ್ಮಿಕರ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ವೇಗಗೊಳಿಸಿದೆ. ಅನಾಮಿಕ ದೂರುದಾರನ ನೀಡಿದ ಮಾಹಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ SIT, ಅವನೊಂದಿಗೆ ಹಿಂದೆ ಕೆಲಸ ಮಾಡಿದವರ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದೆ.

ತನಿಖೆಯ ಭಾಗವಾಗಿ ತಮಿಳುನಾಡಿನ ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಜೊತೆಗೆ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದಲೂ ಹಲವರನ್ನು ಹಾಜರುಪಡಿಸಿ, 1995ರಿಂದ 2014ರ ಅವಧಿಯಲ್ಲಿ ದೂರುದಾರನೊಂದಿಗೆ ಕಾರ್ಯನಿರ್ವಹಿಸಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿ ಪಡೆದು ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.

ಸ್ಪಾಟ್ ನಂ. 13ರಲ್ಲಿ ನೆಲದಡಿಯ ಸ್ಥಿತಿಯನ್ನು ತಿಳಿಯಲು SIT ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನ ಬಳಸಲು ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ ಈ ಯಂತ್ರವನ್ನು ಖಾಸಗಿ ಕಂಪನಿಯಿಂದ ಬಾಡಿಗೆಗೆ ಪಡೆಯಲಾಗುತ್ತಿದ್ದು, ದಿನಕ್ಕೆ ಲಕ್ಷಾಂತರ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಒಟ್ಟಾರೆ ₹20 ಲಕ್ಷದಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮಳೆಯ ಕಾರಣದಿಂದ ನೆಲ ಒದ್ದೆಯಾದರೆ GPR ಸಿಗ್ನಲ್ ದುರ್ಬಲವಾಗುವ ಆತಂಕ ತನಿಖಾಧಿಕಾರಿಗಳಲ್ಲಿದೆ.

ಬೆಳ್ತಂಗಡಿಯಲ್ಲಿ ಇರುವ SIT ಕಚೇರಿಯನ್ನು ಅಧಿಕೃತವಾಗಿ “SIT ಪೊಲೀಸ್ ಠಾಣೆ”ಯಾಗಿ ಪರಿವರ್ತಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ, ಇನ್ನುಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಠಾಣೆಯಲ್ಲಿ ದಾಖಲಿಸಬಹುದು. ಇದಕ್ಕೂ ಮೊದಲು ದೂರುಗಳನ್ನು ಸ್ಥಳೀಯ ಠಾಣೆಯಲ್ಲಿ ದಾಖಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಹೊಸ ಕ್ರಮದಿಂದ ದೂರು ಪ್ರಕ್ರಿಯೆ ಸುಗಮವಾಗಿದೆ.

ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರ ತನ್ನ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದ್ದರಿಂದ, SIT ಅವನಿಗೆ ತಕ್ಷಣವೇ ಭದ್ರತೆ ಒದಗಿಸಿದೆ. ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ದೂರುದಾರನಿಗೆ ಪೊಲೀಸ್ ಎಸ್ಕಾರ್ಟ್ ಮತ್ತು ಇಬ್ಬರು ಸಿಬ್ಬಂದಿಗಳ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚಿನ ಧರ್ಮಸ್ಥಳ ಗಲಾಟೆಯ ಹಿನ್ನೆಲೆಯಲ್ಲಿ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ನಿರ್ದಿಷ್ಟ ಕಾರ್ಯಾಚರಣೆಯನ್ನು ಪ್ರಸ್ತುತ ಮುಂದೂಡಲಾಗಿದೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

13 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago