Latest

ಧರ್ಮಸ್ಥಳ ಶವ ಹೂತು ಪ್ರಕರಣ: SIT ತನಿಖೆಗೆ ತಮಿಳುನಾಡು ಕಾರ್ಮಿಕರ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ವೇಗಗೊಳಿಸಿದೆ. ಅನಾಮಿಕ ದೂರುದಾರನ ನೀಡಿದ ಮಾಹಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ SIT, ಅವನೊಂದಿಗೆ ಹಿಂದೆ ಕೆಲಸ ಮಾಡಿದವರ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದೆ.

ತನಿಖೆಯ ಭಾಗವಾಗಿ ತಮಿಳುನಾಡಿನ ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಜೊತೆಗೆ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದಲೂ ಹಲವರನ್ನು ಹಾಜರುಪಡಿಸಿ, 1995ರಿಂದ 2014ರ ಅವಧಿಯಲ್ಲಿ ದೂರುದಾರನೊಂದಿಗೆ ಕಾರ್ಯನಿರ್ವಹಿಸಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿ ಪಡೆದು ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.

ಸ್ಪಾಟ್ ನಂ. 13ರಲ್ಲಿ ನೆಲದಡಿಯ ಸ್ಥಿತಿಯನ್ನು ತಿಳಿಯಲು SIT ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನ ಬಳಸಲು ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ ಈ ಯಂತ್ರವನ್ನು ಖಾಸಗಿ ಕಂಪನಿಯಿಂದ ಬಾಡಿಗೆಗೆ ಪಡೆಯಲಾಗುತ್ತಿದ್ದು, ದಿನಕ್ಕೆ ಲಕ್ಷಾಂತರ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಒಟ್ಟಾರೆ ₹20 ಲಕ್ಷದಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮಳೆಯ ಕಾರಣದಿಂದ ನೆಲ ಒದ್ದೆಯಾದರೆ GPR ಸಿಗ್ನಲ್ ದುರ್ಬಲವಾಗುವ ಆತಂಕ ತನಿಖಾಧಿಕಾರಿಗಳಲ್ಲಿದೆ.

ಬೆಳ್ತಂಗಡಿಯಲ್ಲಿ ಇರುವ SIT ಕಚೇರಿಯನ್ನು ಅಧಿಕೃತವಾಗಿ “SIT ಪೊಲೀಸ್ ಠಾಣೆ”ಯಾಗಿ ಪರಿವರ್ತಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ, ಇನ್ನುಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಠಾಣೆಯಲ್ಲಿ ದಾಖಲಿಸಬಹುದು. ಇದಕ್ಕೂ ಮೊದಲು ದೂರುಗಳನ್ನು ಸ್ಥಳೀಯ ಠಾಣೆಯಲ್ಲಿ ದಾಖಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಹೊಸ ಕ್ರಮದಿಂದ ದೂರು ಪ್ರಕ್ರಿಯೆ ಸುಗಮವಾಗಿದೆ.

ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರ ತನ್ನ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದ್ದರಿಂದ, SIT ಅವನಿಗೆ ತಕ್ಷಣವೇ ಭದ್ರತೆ ಒದಗಿಸಿದೆ. ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ದೂರುದಾರನಿಗೆ ಪೊಲೀಸ್ ಎಸ್ಕಾರ್ಟ್ ಮತ್ತು ಇಬ್ಬರು ಸಿಬ್ಬಂದಿಗಳ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚಿನ ಧರ್ಮಸ್ಥಳ ಗಲಾಟೆಯ ಹಿನ್ನೆಲೆಯಲ್ಲಿ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ನಿರ್ದಿಷ್ಟ ಕಾರ್ಯಾಚರಣೆಯನ್ನು ಪ್ರಸ್ತುತ ಮುಂದೂಡಲಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago