Latest

ಧರ್ಮಸ್ಥಳ ಶವ ಹೂತು ಪ್ರಕರಣ: SIT ತನಿಖೆಗೆ ತಮಿಳುನಾಡು ಕಾರ್ಮಿಕರ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ವೇಗಗೊಳಿಸಿದೆ. ಅನಾಮಿಕ ದೂರುದಾರನ ನೀಡಿದ ಮಾಹಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ SIT, ಅವನೊಂದಿಗೆ ಹಿಂದೆ ಕೆಲಸ ಮಾಡಿದವರ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದೆ.

ತನಿಖೆಯ ಭಾಗವಾಗಿ ತಮಿಳುನಾಡಿನ ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಜೊತೆಗೆ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದಲೂ ಹಲವರನ್ನು ಹಾಜರುಪಡಿಸಿ, 1995ರಿಂದ 2014ರ ಅವಧಿಯಲ್ಲಿ ದೂರುದಾರನೊಂದಿಗೆ ಕಾರ್ಯನಿರ್ವಹಿಸಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿ ಪಡೆದು ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.

ಸ್ಪಾಟ್ ನಂ. 13ರಲ್ಲಿ ನೆಲದಡಿಯ ಸ್ಥಿತಿಯನ್ನು ತಿಳಿಯಲು SIT ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನ ಬಳಸಲು ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ ಈ ಯಂತ್ರವನ್ನು ಖಾಸಗಿ ಕಂಪನಿಯಿಂದ ಬಾಡಿಗೆಗೆ ಪಡೆಯಲಾಗುತ್ತಿದ್ದು, ದಿನಕ್ಕೆ ಲಕ್ಷಾಂತರ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಒಟ್ಟಾರೆ ₹20 ಲಕ್ಷದಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮಳೆಯ ಕಾರಣದಿಂದ ನೆಲ ಒದ್ದೆಯಾದರೆ GPR ಸಿಗ್ನಲ್ ದುರ್ಬಲವಾಗುವ ಆತಂಕ ತನಿಖಾಧಿಕಾರಿಗಳಲ್ಲಿದೆ.

ಬೆಳ್ತಂಗಡಿಯಲ್ಲಿ ಇರುವ SIT ಕಚೇರಿಯನ್ನು ಅಧಿಕೃತವಾಗಿ “SIT ಪೊಲೀಸ್ ಠಾಣೆ”ಯಾಗಿ ಪರಿವರ್ತಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ, ಇನ್ನುಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಠಾಣೆಯಲ್ಲಿ ದಾಖಲಿಸಬಹುದು. ಇದಕ್ಕೂ ಮೊದಲು ದೂರುಗಳನ್ನು ಸ್ಥಳೀಯ ಠಾಣೆಯಲ್ಲಿ ದಾಖಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಹೊಸ ಕ್ರಮದಿಂದ ದೂರು ಪ್ರಕ್ರಿಯೆ ಸುಗಮವಾಗಿದೆ.

ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರ ತನ್ನ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದ್ದರಿಂದ, SIT ಅವನಿಗೆ ತಕ್ಷಣವೇ ಭದ್ರತೆ ಒದಗಿಸಿದೆ. ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ದೂರುದಾರನಿಗೆ ಪೊಲೀಸ್ ಎಸ್ಕಾರ್ಟ್ ಮತ್ತು ಇಬ್ಬರು ಸಿಬ್ಬಂದಿಗಳ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚಿನ ಧರ್ಮಸ್ಥಳ ಗಲಾಟೆಯ ಹಿನ್ನೆಲೆಯಲ್ಲಿ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ನಿರ್ದಿಷ್ಟ ಕಾರ್ಯಾಚರಣೆಯನ್ನು ಪ್ರಸ್ತುತ ಮುಂದೂಡಲಾಗಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago