ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ವೇಗಗೊಳಿಸಿದೆ. ಅನಾಮಿಕ ದೂರುದಾರನ ನೀಡಿದ ಮಾಹಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ SIT, ಅವನೊಂದಿಗೆ ಹಿಂದೆ ಕೆಲಸ ಮಾಡಿದವರ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದೆ.
ತನಿಖೆಯ ಭಾಗವಾಗಿ ತಮಿಳುನಾಡಿನ ಮೂಲದ ಐವರು ಸಫಾಯಿ ಕರ್ಮಚಾರಿಗಳನ್ನು ವಿಚಾರಿಸಿ, ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಜೊತೆಗೆ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದಲೂ ಹಲವರನ್ನು ಹಾಜರುಪಡಿಸಿ, 1995ರಿಂದ 2014ರ ಅವಧಿಯಲ್ಲಿ ದೂರುದಾರನೊಂದಿಗೆ ಕಾರ್ಯನಿರ್ವಹಿಸಿದವರ ವಿವರಗಳನ್ನು ಸಂಗ್ರಹಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಪಡೆದ ಹಳೆಯ ದಾಖಲೆಗಳನ್ನು ಆಧಾರವಾಗಿ ಪಡೆದು ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.
ಸ್ಪಾಟ್ ನಂ. 13ರಲ್ಲಿ ನೆಲದಡಿಯ ಸ್ಥಿತಿಯನ್ನು ತಿಳಿಯಲು SIT ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ತಂತ್ರಜ್ಞಾನ ಬಳಸಲು ನಿರ್ಧರಿಸಿದೆ. ಬೆಂಗಳೂರಿನಿಂದ ತರಲಾಗುವ ಈ ಯಂತ್ರವನ್ನು ಖಾಸಗಿ ಕಂಪನಿಯಿಂದ ಬಾಡಿಗೆಗೆ ಪಡೆಯಲಾಗುತ್ತಿದ್ದು, ದಿನಕ್ಕೆ ಲಕ್ಷಾಂತರ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಒಟ್ಟಾರೆ ₹20 ಲಕ್ಷದಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮಳೆಯ ಕಾರಣದಿಂದ ನೆಲ ಒದ್ದೆಯಾದರೆ GPR ಸಿಗ್ನಲ್ ದುರ್ಬಲವಾಗುವ ಆತಂಕ ತನಿಖಾಧಿಕಾರಿಗಳಲ್ಲಿದೆ.
ಬೆಳ್ತಂಗಡಿಯಲ್ಲಿ ಇರುವ SIT ಕಚೇರಿಯನ್ನು ಅಧಿಕೃತವಾಗಿ “SIT ಪೊಲೀಸ್ ಠಾಣೆ”ಯಾಗಿ ಪರಿವರ್ತಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಅವರ ಆದೇಶದಂತೆ, ಇನ್ನುಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ SIT ಠಾಣೆಯಲ್ಲಿ ದಾಖಲಿಸಬಹುದು. ಇದಕ್ಕೂ ಮೊದಲು ದೂರುಗಳನ್ನು ಸ್ಥಳೀಯ ಠಾಣೆಯಲ್ಲಿ ದಾಖಲಿಸಿ, ನಂತರ SITಗೆ ವರ್ಗಾಯಿಸಲಾಗುತ್ತಿತ್ತು. ಹೊಸ ಕ್ರಮದಿಂದ ದೂರು ಪ್ರಕ್ರಿಯೆ ಸುಗಮವಾಗಿದೆ.
ಪ್ರಮುಖ ಮಾಹಿತಿ ನೀಡಿದ ಅನಾಮಿಕ ದೂರುದಾರ ತನ್ನ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದ್ದರಿಂದ, SIT ಅವನಿಗೆ ತಕ್ಷಣವೇ ಭದ್ರತೆ ಒದಗಿಸಿದೆ. ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ದೂರುದಾರನಿಗೆ ಪೊಲೀಸ್ ಎಸ್ಕಾರ್ಟ್ ಮತ್ತು ಇಬ್ಬರು ಸಿಬ್ಬಂದಿಗಳ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಇತ್ತೀಚಿನ ಧರ್ಮಸ್ಥಳ ಗಲಾಟೆಯ ಹಿನ್ನೆಲೆಯಲ್ಲಿ ಈ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ, ನಿರ್ದಿಷ್ಟ ಕಾರ್ಯಾಚರಣೆಯನ್ನು ಪ್ರಸ್ತುತ ಮುಂದೂಡಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…