Latest

ಧರ್ಮಸ್ಥಳ: ನಾನು ಶವ ಹೂತಿದ್ದನ್ನು ನೋಡಿದ್ದೇನೆ! – ಎಸ್‌ಐಟಿ ಮುಂದೆ ಹೊಸ ಟ್ವಿಸ್ಟ್

ಧರ್ಮಸ್ಥಳ ಶವ ಹೂತು ಪ್ರಕರಣ ಇದೀಗ ಹೊಸಮಟ್ಟದ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನವೂ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಈಗಾಗಲೇ ಅನೇಕ ದಿಕ್ಕುಗಳಲ್ಲಿ ತನಿಖೆ ಮುಂದುವರೆದಿದೆ. ಇತ್ತೀಚೆಗೆ, ಈ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಸಿಕ್ಕಿದ್ದು, ಇದರ ಪ್ರಭಾವ ತನಿಖೆಯ ದಿಕ್ಕು ಬದಲಿಸಬಹುದು ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಇಚೀಲಂಪಾಡಿ ಗ್ರಾಮದ ನಿವಾಸಿ ಜಯನ್ ಎಂಬ ವ್ಯಕ್ತಿ, ಧರ್ಮಸ್ಥಳದಲ್ಲಿ 15 ವರ್ಷದ ಬಾಲಕಿಯನ್ನು ಹೂತುಹಾಕಿರುವುದನ್ನು ತಾನೇ ನೈಜವಾಗಿ ಕಂಡಿದ್ದೇನೆ ಎಂದು ಉಲ್ಲೇಖಿಸಿ, ಎಸ್‌ಐಟಿ ಅಧಿಕಾರಿಗಳ ಮುಂದೆ ಸಾಕ್ಷ್ಯ ಹೇಳಿಕೆ ನೀಡಿದ್ದಾನೆ. ನಿನ್ನೆ ಸಂಜೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ಜಯನ್, “ಈ ಘಟನೆಗೆ ನಾನು ಪ್ರತ್ಯಕ್ಷ ಸಾಕ್ಷಿ. ಶವ ಹೂತಿರುವ ಸ್ಥಳ ನನಗೆ ಸರಿಯಾಗಿ ಗೊತ್ತಿದೆ” ಎಂದು ಸ್ಪಷ್ಟವಾಗಿ ಹೇಳಿದ್ದಾನೆ.

ಜಯನ್ ನೀಡಿರುವ ಹೇಳಿಕೆಗೆ ಗಂಭೀರತೆಯಿಂದ ಪ್ರತಿಕ್ರಿಯಿಸಿದ ಎಸ್‌ಐಟಿ, ಭಾನುವಾರ ರಜೆಯ ಹಿನ್ನೆಲೆ ಕೊಟ್ಟಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಎಸ್‌ಐಟಿ ಈಗ ಜಯನ್‌ನ ಹೇಳಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ತಯಾರಾಗಿದೆ.

ಇದಕ್ಕೂ ಮುನ್ನ, ಅನಾಮಿಕ ವ್ಯಕ್ತಿಯೊಬ್ಬ “ನಾನು ಈಗಾಗಲೇ ನೂರಾರು ಶವಗಳನ್ನು ಹೂತಿದ್ದೇನೆ” ಎಂಬ ಶಾಕಿಂಗ್ ದೂರನ್ನು ನೀಡಿದ್ದನು. ಈ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ಮುಂದುವರೆಸಿದ್ದು, ಶವ ಹೂತುಹಾಕಿರುವ ಸಾಧ್ಯತೆಯಿರುವ 10 ಸ್ಥಳಗಳನ್ನು ಗುರುತಿಸಲಾಗಿತ್ತು. ಅದರಲ್ಲಿಯೂ 9 ಸ್ಥಳಗಳಲ್ಲಿ ಎತ್ತಿ ತೋಡಿದಾಗ ಒಂದೇ ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿದ್ದವು.

ಶನಿವಾರದಂದು, ಎಸ್‌ಐಟಿ ಅಧಿಕಾರಿಗಳು ಮಾನವ ಶ್ರಮ ಮತ್ತು ಯಂತ್ರೋಪಕರಣಗಳ ನೆರವಿನಿಂದ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದರು. ತೀವ್ರ ಮಳೆಯ ನಡುವೆಯೂ ಕಾರ್ಯಾಚರಣೆ ನಿಲ್ಲಿಸದೇ ಸುಮಾರು 6 ಅಡಿ ಆಳವರೆಗೆ ಮಣ್ಣು ಅಗೆದರೂ ಹೊಸ ಯಾವುದೂ ಪತ್ತೆಯಾಗಲಿಲ್ಲ.

ಈ ನಡುವೆಯೇ, ಸಹಾಯಕ ಆಯುಕ್ತರು, ಕಂದಾಯ ಇಲಾಖೆ, ಎಫ್‌ಎಸ್‌ಎಲ್ ತಂಡ ಮತ್ತು ಶ್ವಾನದಳದ ಅಧಿಕಾರಿಗಳಿಗೆ ಭಾನುವಾರ ರಜೆಯಿರುವುದರಿಂದ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮುಂದಿನ ಹಂತದ ಕಾರ್ಯಾಚರಣೆ ಸೋಮವಾರ ಮತ್ತೆ ಆರಂಭವಾಗಲಿದೆ.

ಧರ್ಮಸ್ಥಳ ಪ್ರಕರಣದ ತನಿಖೆ ಈಗ ಸಾಕ್ಷಿದಾರರ ಹೇಳಿಕೆ ಮತ್ತು ಸ್ಥಳ ಪರಿಶೀಲನೆಯ ಹಂತದಲ್ಲಿದೆ. ಜಯನ್ ನೀಡಿರುವ ಮಹತ್ವದ ಮಾಹಿತಿ ಪ್ರಕರಣದಲ್ಲಿ ಸತ್ಯವನ್ನು ಬೆಳಕಿಗೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದೆಂಬ ನಿರೀಕ್ಷೆ ಇದೆ.

ಎಸ್‌ಐಟಿ ಮುಂದಿನ ಬೆಳವಣಿಗೆಗಳಿಗೆ ಎಲ್ಲೆದುರು ಕಾಯುತ್ತಿರುವ ನಡುವೆಯೇ, ಧರ್ಮಸ್ಥಳ ಪ್ರಕರಣದಲ್ಲಿ ನ್ಯಾಯ ಸಿಗಲಿ ಎಂಬ ನಿರೀಕ್ಷೆಯಲ್ಲಿ ಸಾರ್ವಜನಿಕರು ನಿರೀಕ್ಷೆಯ ನೋಟದೊಂದಿಗೆ ಗಮನಹರಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

2 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

18 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago