ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಭಯಾನಕ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ತನಿಖೆಗೆ ಹೊಸ ತಿರುವು ಸಿಕ್ಕಿದ್ದು, ಈ ಹಿಂದೆ ಸಿಐಡಿ ತಿರಸ್ಕರಿಸಿದ ಪದ್ಮಲತಾ ಪ್ರಕರಣ ಮತ್ತೆ ಚರ್ಚೆಯ ಕೇಂದ್ರವಾಗಿದೆ.
ಇತ್ತೀಚೆಗೆ, ಧರ್ಮಸ್ಥಳದ ಸುತ್ತಮುತ್ತ ಹಲವಾರು ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಒಂದು ವ್ಯಕ್ತಿ ಈ ಎಲ್ಲ ಪ್ರಕರಣಗಳ ಬಗ್ಗೆ ನಿಖರ ಮಾಹಿತಿಯೊಂದಿಗೆ ಎಫ್ಐಆರ್ ದಾಖಲಿಸಿದ್ದಾನೆ. ತನಿಖಾಧಿಕಾರಿಗಳ ಮುಂದೆ ತಾನೇ ಕೆಲ ಹೆಣಗಳನ್ನು ಹೂತುಬಿಟ್ಟಿರುವುದಾಗಿ ಹೇಳಿದ ಆತ, ಅಸ್ತಿಪಂಜರಗಳ ಸ್ಥಳಗಳನ್ನು ತೋರಿಸಲು ಸಿದ್ಧ ಎಂದು ಈ ಹೇಳಿಕೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿ ವಿಶೇಷ ತನಿಖಾ ತಂಡ (SIT) ರಚಿಸಿದೆ.
ಈ ಹೊಸ ಬೆಳವಣಿಗೆಯ ನಡುವೆ 39 ವರ್ಷಗಳ ಹಿಂದಿನ ಪದ್ಮಲತಾ ಪ್ರಕರಣ ಮತ್ತೆ ದೃಷ್ಟಿಗೆ ಬಂದಿದೆ. 1986ರ ಡಿಸೆಂಬರ್ 22ರಂದು ಬೋಳಿಯಾರು ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪದ್ಮಲತಾ, ಕಮ್ಯೂನಿಸ್ಟ್ ಪಕ್ಷದ ಪ್ರಮುಖ ಮುಖಂಡರ ಮಗಳಾಗಿದ್ದರು. ಕೆಲ ದಿನಗಳ ನಂತರ, ಅವಳ ಅಸ್ತಿಪಂಜರ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಈ ಕುರಿತು ಸಾಕಷ್ಟು ಅನುಮಾನಗಳು ಮೂಡಿದ್ದವು. ಆದರೆ, ಕಾಲಕ್ರಮೇಣ ತನಿಖೆ ನಿಧಾನವಾಗಿ ಮುಸುಕಿಬಿದ್ದು,
ಈಗ ಎಸ್ಐಟಿ ತಂಡ ಹೊಸ ಉತ್ಸಾಹದಿಂದ ತನಿಖೆ ಆರಂಭಿಸಿರುವ ಹಿನ್ನಲೆಯಲ್ಲಿ ಪದ್ಮಲತಾ ಕುಟುಂಬ ಈ ದೀರ್ಘಕಾಲದ ನ್ಯಾಯದ ನಿರೀಕ್ಷೆಗೆ ಪರಿಹಾರ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದೆ. ಈ ಪ್ರಕರಣದ ನಿಜ ಮತ್ತು ಸತ್ಯಾಂಶ ಹೊರಬಂದು, ದೋಷಿಗಳು ಕಾನೂನಿನ ಮುಂದೆ ನಿಲ್ಲುತ್ತಾರೆ ಎಂಬ ವಿಶ್ವಾಸ ಸ್ಥಳೀಯರಲ್ಲಿ ಉಂಟಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…