Latest

ಧರ್ಮಸ್ಥಳ: ಬೆಳ್ತಂಗಡಿಯಲ್ಲಿ ಎಸ್‌ಐಟಿ ತನಿಖಾ ಕಚೇರಿ ಸ್ಥಾಪನೆ.!

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಕರಣದ ತನಿಖೆ ಈಗ ವಿಶೇಷ ತನಿಖಾ ತಂಡದ (SIT) ಕೈಗೆ ಹೋಗಿದೆ. ರಾಜ್ಯ ಸರ್ಕಾರದಿಂದಲೇ ವಿಶೇಷ ಆದೇಶ ಹೊರಡಿಸಿ ಈ ಎಸ್‌ಐಟಿ ತಂಡವನ್ನು ರಚಿಸಲಾಗಿದ್ದು, ತನಿಖೆಗೆ ವೇಗ ನೀಡಲು ಬೆಳ್ತಂಗಡಿಯಲ್ಲಿ ವಿಶೇಷ ಕಚೇರಿಯನ್ನು ಸ್ಥಾಪಿಸಲಾಗುತ್ತಿದೆ.

ತಕ್ಷಣಿಕ ಕ್ರಮವಾಗಿ, ಎಸ್‌ಐಟಿ ಅಧಿಕಾರಿಗಳ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಕರಣದ ಮೂಲ ತನಿಖೆಗೆ ಅನುಕೂಲವಾಗುವಂತೆ ಬೆಳ್ತಂಗಡಿ ಪಟ್ಟಣದ ಪೊಲೀಸ್ ಠಾಣೆ ಸಮೀಪದ ನೂತನ ಪೊಲೀಸ್ ಕ್ವಾಟರ್ಸ್‌ಗಳಲ್ಲಿ ಈ ಕಚೇರಿ ಆರಂಭಗೊಳ್ಳಲಿದೆ.

ಎಸ್‌ಐಟಿ ರಚನೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರಿಂದ ಸರಕಾರಕ್ಕೆ ಸಲ್ಲಿಸಲಾದ ಶಿಫಾರಸುಪತ್ರ ಪ್ರಮುಖ ಆಧಾರವಾಗಿದೆ. ಈ ಪತ್ರದಲ್ಲಿ ತೀವ್ರವಾಗಿ ಉಲ್ಲೇಖಿಸಲಾದ ಅಂಶಗಳು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025, ಬಾರತ್ ನ್ಯುಸಂಹಿತೆಯ (BNS) ಸೆಕ್ಷನ್ 211(ಎ) ಹಾಗೂ ಇತರೆ ವಿಧಾನದಡಿ ದಾಖಲಾಗಿರುವ ಪ್ರಕರಣದ ತಾತ್ವಿಕತೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರವು ಎಸ್‌ಐಟಿ ರಚನೆಗೆ ತೀರ್ಮಾನಿಸಿದೆ.

ಪ್ರಕರಣದ ತನಿಖೆಗೆ ಇದೊಂದು ತಿರುವು ಬದಲಾಯಿಸುವ ಹಂತವೆನಿಸಿದ್ದು, ಧರ್ಮಸ್ಥಳದಲ್ಲಿ ನಡೆದ ಘಟನೆಯ ಸಂಪೂರ್ಣ ಸತ್ಯಾಂಶ ಹೊರತೆಗೆದು, ನ್ಯಾಯ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ತನಿಖಾ ಕ್ರಮ ಕೈಗೊಳ್ಳಲಾಗಿದೆ. ಇದೀಗ ಎಸ್‌ಐಟಿ ತಂಡದಿಂದ ಸಂಪೂರ್ಣ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಸಂಬಂಧಿತ ಎಲ್ಲಾ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ನಿರೀಕ್ಷೆ ಇದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

21 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

21 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

21 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

21 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago