ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಕರಣದ ತನಿಖೆ ಈಗ ವಿಶೇಷ ತನಿಖಾ ತಂಡದ (SIT) ಕೈಗೆ ಹೋಗಿದೆ. ರಾಜ್ಯ ಸರ್ಕಾರದಿಂದಲೇ ವಿಶೇಷ ಆದೇಶ ಹೊರಡಿಸಿ ಈ ಎಸ್ಐಟಿ ತಂಡವನ್ನು ರಚಿಸಲಾಗಿದ್ದು, ತನಿಖೆಗೆ ವೇಗ ನೀಡಲು ಬೆಳ್ತಂಗಡಿಯಲ್ಲಿ ವಿಶೇಷ ಕಚೇರಿಯನ್ನು ಸ್ಥಾಪಿಸಲಾಗುತ್ತಿದೆ.
ತಕ್ಷಣಿಕ ಕ್ರಮವಾಗಿ, ಎಸ್ಐಟಿ ಅಧಿಕಾರಿಗಳ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಕರಣದ ಮೂಲ ತನಿಖೆಗೆ ಅನುಕೂಲವಾಗುವಂತೆ ಬೆಳ್ತಂಗಡಿ ಪಟ್ಟಣದ ಪೊಲೀಸ್ ಠಾಣೆ ಸಮೀಪದ ನೂತನ ಪೊಲೀಸ್ ಕ್ವಾಟರ್ಸ್ಗಳಲ್ಲಿ ಈ ಕಚೇರಿ ಆರಂಭಗೊಳ್ಳಲಿದೆ.
ಎಸ್ಐಟಿ ರಚನೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರಿಂದ ಸರಕಾರಕ್ಕೆ ಸಲ್ಲಿಸಲಾದ ಶಿಫಾರಸುಪತ್ರ ಪ್ರಮುಖ ಆಧಾರವಾಗಿದೆ. ಈ ಪತ್ರದಲ್ಲಿ ತೀವ್ರವಾಗಿ ಉಲ್ಲೇಖಿಸಲಾದ ಅಂಶಗಳು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025, ಬಾರತ್ ನ್ಯುಸಂಹಿತೆಯ (BNS) ಸೆಕ್ಷನ್ 211(ಎ) ಹಾಗೂ ಇತರೆ ವಿಧಾನದಡಿ ದಾಖಲಾಗಿರುವ ಪ್ರಕರಣದ ತಾತ್ವಿಕತೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರವು ಎಸ್ಐಟಿ ರಚನೆಗೆ ತೀರ್ಮಾನಿಸಿದೆ.
ಪ್ರಕರಣದ ತನಿಖೆಗೆ ಇದೊಂದು ತಿರುವು ಬದಲಾಯಿಸುವ ಹಂತವೆನಿಸಿದ್ದು, ಧರ್ಮಸ್ಥಳದಲ್ಲಿ ನಡೆದ ಘಟನೆಯ ಸಂಪೂರ್ಣ ಸತ್ಯಾಂಶ ಹೊರತೆಗೆದು, ನ್ಯಾಯ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ತನಿಖಾ ಕ್ರಮ ಕೈಗೊಳ್ಳಲಾಗಿದೆ. ಇದೀಗ ಎಸ್ಐಟಿ ತಂಡದಿಂದ ಸಂಪೂರ್ಣ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಸಂಬಂಧಿತ ಎಲ್ಲಾ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ನಿರೀಕ್ಷೆ ಇದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…