ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಕರಣದ ತನಿಖೆ ಈಗ ವಿಶೇಷ ತನಿಖಾ ತಂಡದ (SIT) ಕೈಗೆ ಹೋಗಿದೆ. ರಾಜ್ಯ ಸರ್ಕಾರದಿಂದಲೇ ವಿಶೇಷ ಆದೇಶ ಹೊರಡಿಸಿ ಈ ಎಸ್ಐಟಿ ತಂಡವನ್ನು ರಚಿಸಲಾಗಿದ್ದು, ತನಿಖೆಗೆ ವೇಗ ನೀಡಲು ಬೆಳ್ತಂಗಡಿಯಲ್ಲಿ ವಿಶೇಷ ಕಚೇರಿಯನ್ನು ಸ್ಥಾಪಿಸಲಾಗುತ್ತಿದೆ.
ತಕ್ಷಣಿಕ ಕ್ರಮವಾಗಿ, ಎಸ್ಐಟಿ ಅಧಿಕಾರಿಗಳ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಕರಣದ ಮೂಲ ತನಿಖೆಗೆ ಅನುಕೂಲವಾಗುವಂತೆ ಬೆಳ್ತಂಗಡಿ ಪಟ್ಟಣದ ಪೊಲೀಸ್ ಠಾಣೆ ಸಮೀಪದ ನೂತನ ಪೊಲೀಸ್ ಕ್ವಾಟರ್ಸ್ಗಳಲ್ಲಿ ಈ ಕಚೇರಿ ಆರಂಭಗೊಳ್ಳಲಿದೆ.
ಎಸ್ಐಟಿ ರಚನೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರಿಂದ ಸರಕಾರಕ್ಕೆ ಸಲ್ಲಿಸಲಾದ ಶಿಫಾರಸುಪತ್ರ ಪ್ರಮುಖ ಆಧಾರವಾಗಿದೆ. ಈ ಪತ್ರದಲ್ಲಿ ತೀವ್ರವಾಗಿ ಉಲ್ಲೇಖಿಸಲಾದ ಅಂಶಗಳು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025, ಬಾರತ್ ನ್ಯುಸಂಹಿತೆಯ (BNS) ಸೆಕ್ಷನ್ 211(ಎ) ಹಾಗೂ ಇತರೆ ವಿಧಾನದಡಿ ದಾಖಲಾಗಿರುವ ಪ್ರಕರಣದ ತಾತ್ವಿಕತೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರವು ಎಸ್ಐಟಿ ರಚನೆಗೆ ತೀರ್ಮಾನಿಸಿದೆ.
ಪ್ರಕರಣದ ತನಿಖೆಗೆ ಇದೊಂದು ತಿರುವು ಬದಲಾಯಿಸುವ ಹಂತವೆನಿಸಿದ್ದು, ಧರ್ಮಸ್ಥಳದಲ್ಲಿ ನಡೆದ ಘಟನೆಯ ಸಂಪೂರ್ಣ ಸತ್ಯಾಂಶ ಹೊರತೆಗೆದು, ನ್ಯಾಯ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ತನಿಖಾ ಕ್ರಮ ಕೈಗೊಳ್ಳಲಾಗಿದೆ. ಇದೀಗ ಎಸ್ಐಟಿ ತಂಡದಿಂದ ಸಂಪೂರ್ಣ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಸಂಬಂಧಿತ ಎಲ್ಲಾ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ನಿರೀಕ್ಷೆ ಇದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…