Latest

ಹೆದ್ದಾರಿಯಲ್ಲೇ ಶಾಮಿಯಾನ ಹಾಕಿ ಧರಣಿ; ಬೆಂಗಳೂರು-ಮೈಸೂರು ರಸ್ತೆ ಬಂದ್​

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಹಳ್ಳಿಗಳ ಜನರು ಹೆದ್ದಾರಿ ಬಂದ್ ಮಾಡಿದ್ದು ಕಾರಣವಾಗಿದೆ. ಹನಕೆರೆ ಸಮೀಪ ಅಂಡರ್‌ಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೊಂದರೆ ಆಗಲಿದೆ ಎಂದಿದ್ದಾರೆ. ಇದಕ್ಕೆಲದಕ್ಕೂ ಕಾರಣ ಗ್ರಾಮದಿಂದ ಸುಮಾರು 200 ಮೀಟರ್ ದೂರದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗುತ್ತಿರುವುದು. ಗ್ರಾಮದ ಹೊರವಲಯದಲ್ಲಿ ಅಂಡರ್‌ಪಾಸ್ ಇರುವುದರಿಂದ ಸರಗಳ್ಳತನ, ದರೋಡೆ ಪ್ರಕರಣಗಳು ನಡೆಯುವ ಬಗ್ಗೆ ಆತಂಕಗೊಂಡಿರುವ ಗ್ರಾಮಸ್ಥರು ಸಂಜೆ ಹಾಗೂ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.
ಭರವಸೆ ಕೊಟ್ಟು ಕಾಮಗಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು. ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮಸ್ಥರು, ವಿದ್ಯಾರ್ಥಿನಿಯರು, ಮಹಿಳೆಯರಿಗೆ ಓಡಾಡಲು ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಮಾಡು ವರೆಗೂ ಬಂದ್ ಹಿಂಪಡೆಯಲ್ಲವೆಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಸದ್ಯ ಜನರು ಹೆದ್ದಾರಿಯಲ್ಲಿಯೇ ಶಾಮಿಯಾನ ಹಾಕಿ ಧರಣಿ‌ ಕುಳಿತಿದ್ದು ಗ್ರಾಮಸ್ಥರಿಗೆ ರೈತ ಸಂಘವೂ ಸಾಥ್ ನೀಡಿದೆ. ಇದರಿಂದಾಗಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ವಾಹನಗಳು ನಿಂತಿವೆ. ಪ್ರತಿಭಟನಾಕಾರರಿಂದಾಗಿ ಬೇಸತ್ತ ಪ್ರಯಾಣಿಕರು ಅವರೊಂದಿಗೆ ವಾಗ್ವಾದ ಮಾಡಿದ್ದಾರೆ. ಪ್ರತಿಭಟನಾಕಾರರ ಜತೆ ಮಹಿಳೆಯೊಬ್ಬರು ವಾಗ್ವಾದಕ್ಕೆ ಇಳಿದಿದ್ದು ರಸ್ತೆಯಲ್ಲಿ ಹೋಗಲು ಬಿಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ಆಕೆಯ ಮನವೊಲಿಸಲು ಪ್ರತಿಭಾಟನಾಕಾರರು ‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಜನರ ಅನುಕೂಲಕ್ಕಾಗಿ ಈ ಪ್ರತಿಭಟನೆ’ ಎಂದಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ‘ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಡಿಸೆಂಬರ್‌ನಲ್ಲೇ ಮನವಿ ಸಲ್ಲಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಕೆಲಸ ಆರಂಭಿಸಲಾಗುವುದು’ ಎಂದಿದ್ದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಪತ್ರವನ್ನು ಎಂಜಿನಿಯರ್ ತೋರಿಸಿದ್ದಾರೆ. ಎಂಜಿನಿಯರ್ ತಂದಿದ್ದ ಪತ್ರವನ್ನು ಹರಿದ ಪ್ರತಿಭಟನಾಕಾರರು ‘ಹಲವು ತಿಂಗಳಿನಿಂದಲೂ ಇದೇ ಕಾರಣ‌ ಕೊಡುತ್ತಾ ಬಂದಿದ್ದೀರಿ. ಈಗಲೂ ಹಳೆ ಲೆಟರ್ ಹಿಡಿದು ಬಂದಿದ್ದೀರಿ, ಈ ಪತ್ರಕ್ಕೆ ಯಾವುದೇ ಮಹತ್ವ ಇಲ್ಲ. ತತಕ್ಷಣ ಅಂಡರ್ ಪಾಸ್ ನಿರ್ಮಾಣ ಆರಂಭಿಸಿ. ನಿಮಗೆ ಯಾವುದೇ ಕಿರೀಟ ಹಾಕಿಲ್ಲ, ನೀವು ಜನಸೇವಕರು. ಅಹಂಕಾರ ಬಿಟ್ಟು ಕೆಲಸ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಎಂಜಿನಿಯರ್​ಗೆ ತಾಕೀತು ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

12 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

12 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

13 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago