Latest

ಹೆದ್ದಾರಿಯಲ್ಲೇ ಶಾಮಿಯಾನ ಹಾಕಿ ಧರಣಿ; ಬೆಂಗಳೂರು-ಮೈಸೂರು ರಸ್ತೆ ಬಂದ್​

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಹಳ್ಳಿಗಳ ಜನರು ಹೆದ್ದಾರಿ ಬಂದ್ ಮಾಡಿದ್ದು ಕಾರಣವಾಗಿದೆ. ಹನಕೆರೆ ಸಮೀಪ ಅಂಡರ್‌ಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೊಂದರೆ ಆಗಲಿದೆ ಎಂದಿದ್ದಾರೆ. ಇದಕ್ಕೆಲದಕ್ಕೂ ಕಾರಣ ಗ್ರಾಮದಿಂದ ಸುಮಾರು 200 ಮೀಟರ್ ದೂರದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗುತ್ತಿರುವುದು. ಗ್ರಾಮದ ಹೊರವಲಯದಲ್ಲಿ ಅಂಡರ್‌ಪಾಸ್ ಇರುವುದರಿಂದ ಸರಗಳ್ಳತನ, ದರೋಡೆ ಪ್ರಕರಣಗಳು ನಡೆಯುವ ಬಗ್ಗೆ ಆತಂಕಗೊಂಡಿರುವ ಗ್ರಾಮಸ್ಥರು ಸಂಜೆ ಹಾಗೂ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.
ಭರವಸೆ ಕೊಟ್ಟು ಕಾಮಗಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು. ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮಸ್ಥರು, ವಿದ್ಯಾರ್ಥಿನಿಯರು, ಮಹಿಳೆಯರಿಗೆ ಓಡಾಡಲು ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಮಾಡು ವರೆಗೂ ಬಂದ್ ಹಿಂಪಡೆಯಲ್ಲವೆಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಸದ್ಯ ಜನರು ಹೆದ್ದಾರಿಯಲ್ಲಿಯೇ ಶಾಮಿಯಾನ ಹಾಕಿ ಧರಣಿ‌ ಕುಳಿತಿದ್ದು ಗ್ರಾಮಸ್ಥರಿಗೆ ರೈತ ಸಂಘವೂ ಸಾಥ್ ನೀಡಿದೆ. ಇದರಿಂದಾಗಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ವಾಹನಗಳು ನಿಂತಿವೆ. ಪ್ರತಿಭಟನಾಕಾರರಿಂದಾಗಿ ಬೇಸತ್ತ ಪ್ರಯಾಣಿಕರು ಅವರೊಂದಿಗೆ ವಾಗ್ವಾದ ಮಾಡಿದ್ದಾರೆ. ಪ್ರತಿಭಟನಾಕಾರರ ಜತೆ ಮಹಿಳೆಯೊಬ್ಬರು ವಾಗ್ವಾದಕ್ಕೆ ಇಳಿದಿದ್ದು ರಸ್ತೆಯಲ್ಲಿ ಹೋಗಲು ಬಿಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ಆಕೆಯ ಮನವೊಲಿಸಲು ಪ್ರತಿಭಾಟನಾಕಾರರು ‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಜನರ ಅನುಕೂಲಕ್ಕಾಗಿ ಈ ಪ್ರತಿಭಟನೆ’ ಎಂದಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ‘ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಡಿಸೆಂಬರ್‌ನಲ್ಲೇ ಮನವಿ ಸಲ್ಲಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಕೆಲಸ ಆರಂಭಿಸಲಾಗುವುದು’ ಎಂದಿದ್ದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಪತ್ರವನ್ನು ಎಂಜಿನಿಯರ್ ತೋರಿಸಿದ್ದಾರೆ. ಎಂಜಿನಿಯರ್ ತಂದಿದ್ದ ಪತ್ರವನ್ನು ಹರಿದ ಪ್ರತಿಭಟನಾಕಾರರು ‘ಹಲವು ತಿಂಗಳಿನಿಂದಲೂ ಇದೇ ಕಾರಣ‌ ಕೊಡುತ್ತಾ ಬಂದಿದ್ದೀರಿ. ಈಗಲೂ ಹಳೆ ಲೆಟರ್ ಹಿಡಿದು ಬಂದಿದ್ದೀರಿ, ಈ ಪತ್ರಕ್ಕೆ ಯಾವುದೇ ಮಹತ್ವ ಇಲ್ಲ. ತತಕ್ಷಣ ಅಂಡರ್ ಪಾಸ್ ನಿರ್ಮಾಣ ಆರಂಭಿಸಿ. ನಿಮಗೆ ಯಾವುದೇ ಕಿರೀಟ ಹಾಕಿಲ್ಲ, ನೀವು ಜನಸೇವಕರು. ಅಹಂಕಾರ ಬಿಟ್ಟು ಕೆಲಸ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಎಂಜಿನಿಯರ್​ಗೆ ತಾಕೀತು ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

4 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

4 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

17 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

17 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

17 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

17 hours ago