Latest

ಹೆದ್ದಾರಿಯಲ್ಲೇ ಶಾಮಿಯಾನ ಹಾಕಿ ಧರಣಿ; ಬೆಂಗಳೂರು-ಮೈಸೂರು ರಸ್ತೆ ಬಂದ್​

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಹಳ್ಳಿಗಳ ಜನರು ಹೆದ್ದಾರಿ ಬಂದ್ ಮಾಡಿದ್ದು ಕಾರಣವಾಗಿದೆ. ಹನಕೆರೆ ಸಮೀಪ ಅಂಡರ್‌ಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೊಂದರೆ ಆಗಲಿದೆ ಎಂದಿದ್ದಾರೆ. ಇದಕ್ಕೆಲದಕ್ಕೂ ಕಾರಣ ಗ್ರಾಮದಿಂದ ಸುಮಾರು 200 ಮೀಟರ್ ದೂರದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗುತ್ತಿರುವುದು. ಗ್ರಾಮದ ಹೊರವಲಯದಲ್ಲಿ ಅಂಡರ್‌ಪಾಸ್ ಇರುವುದರಿಂದ ಸರಗಳ್ಳತನ, ದರೋಡೆ ಪ್ರಕರಣಗಳು ನಡೆಯುವ ಬಗ್ಗೆ ಆತಂಕಗೊಂಡಿರುವ ಗ್ರಾಮಸ್ಥರು ಸಂಜೆ ಹಾಗೂ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.
ಭರವಸೆ ಕೊಟ್ಟು ಕಾಮಗಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು. ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮಸ್ಥರು, ವಿದ್ಯಾರ್ಥಿನಿಯರು, ಮಹಿಳೆಯರಿಗೆ ಓಡಾಡಲು ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಮಾಡು ವರೆಗೂ ಬಂದ್ ಹಿಂಪಡೆಯಲ್ಲವೆಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಸದ್ಯ ಜನರು ಹೆದ್ದಾರಿಯಲ್ಲಿಯೇ ಶಾಮಿಯಾನ ಹಾಕಿ ಧರಣಿ‌ ಕುಳಿತಿದ್ದು ಗ್ರಾಮಸ್ಥರಿಗೆ ರೈತ ಸಂಘವೂ ಸಾಥ್ ನೀಡಿದೆ. ಇದರಿಂದಾಗಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ವಾಹನಗಳು ನಿಂತಿವೆ. ಪ್ರತಿಭಟನಾಕಾರರಿಂದಾಗಿ ಬೇಸತ್ತ ಪ್ರಯಾಣಿಕರು ಅವರೊಂದಿಗೆ ವಾಗ್ವಾದ ಮಾಡಿದ್ದಾರೆ. ಪ್ರತಿಭಟನಾಕಾರರ ಜತೆ ಮಹಿಳೆಯೊಬ್ಬರು ವಾಗ್ವಾದಕ್ಕೆ ಇಳಿದಿದ್ದು ರಸ್ತೆಯಲ್ಲಿ ಹೋಗಲು ಬಿಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ಆಕೆಯ ಮನವೊಲಿಸಲು ಪ್ರತಿಭಾಟನಾಕಾರರು ‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಜನರ ಅನುಕೂಲಕ್ಕಾಗಿ ಈ ಪ್ರತಿಭಟನೆ’ ಎಂದಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ‘ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಡಿಸೆಂಬರ್‌ನಲ್ಲೇ ಮನವಿ ಸಲ್ಲಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಕೆಲಸ ಆರಂಭಿಸಲಾಗುವುದು’ ಎಂದಿದ್ದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಪತ್ರವನ್ನು ಎಂಜಿನಿಯರ್ ತೋರಿಸಿದ್ದಾರೆ. ಎಂಜಿನಿಯರ್ ತಂದಿದ್ದ ಪತ್ರವನ್ನು ಹರಿದ ಪ್ರತಿಭಟನಾಕಾರರು ‘ಹಲವು ತಿಂಗಳಿನಿಂದಲೂ ಇದೇ ಕಾರಣ‌ ಕೊಡುತ್ತಾ ಬಂದಿದ್ದೀರಿ. ಈಗಲೂ ಹಳೆ ಲೆಟರ್ ಹಿಡಿದು ಬಂದಿದ್ದೀರಿ, ಈ ಪತ್ರಕ್ಕೆ ಯಾವುದೇ ಮಹತ್ವ ಇಲ್ಲ. ತತಕ್ಷಣ ಅಂಡರ್ ಪಾಸ್ ನಿರ್ಮಾಣ ಆರಂಭಿಸಿ. ನಿಮಗೆ ಯಾವುದೇ ಕಿರೀಟ ಹಾಕಿಲ್ಲ, ನೀವು ಜನಸೇವಕರು. ಅಹಂಕಾರ ಬಿಟ್ಟು ಕೆಲಸ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಎಂಜಿನಿಯರ್​ಗೆ ತಾಕೀತು ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago