Latest

ಹೆದ್ದಾರಿಯಲ್ಲೇ ಶಾಮಿಯಾನ ಹಾಕಿ ಧರಣಿ; ಬೆಂಗಳೂರು-ಮೈಸೂರು ರಸ್ತೆ ಬಂದ್​

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಹಳ್ಳಿಗಳ ಜನರು ಹೆದ್ದಾರಿ ಬಂದ್ ಮಾಡಿದ್ದು ಕಾರಣವಾಗಿದೆ. ಹನಕೆರೆ ಸಮೀಪ ಅಂಡರ್‌ಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೊಂದರೆ ಆಗಲಿದೆ ಎಂದಿದ್ದಾರೆ. ಇದಕ್ಕೆಲದಕ್ಕೂ ಕಾರಣ ಗ್ರಾಮದಿಂದ ಸುಮಾರು 200 ಮೀಟರ್ ದೂರದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗುತ್ತಿರುವುದು. ಗ್ರಾಮದ ಹೊರವಲಯದಲ್ಲಿ ಅಂಡರ್‌ಪಾಸ್ ಇರುವುದರಿಂದ ಸರಗಳ್ಳತನ, ದರೋಡೆ ಪ್ರಕರಣಗಳು ನಡೆಯುವ ಬಗ್ಗೆ ಆತಂಕಗೊಂಡಿರುವ ಗ್ರಾಮಸ್ಥರು ಸಂಜೆ ಹಾಗೂ ರಾತ್ರಿ ವೇಳೆ ಓಡಾಡಲು ಭಯಪಡುತ್ತಿದ್ದಾರೆ.
ಭರವಸೆ ಕೊಟ್ಟು ಕಾಮಗಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು. ಪ್ರತಿಭಟನೆ ಮಾಡುತ್ತಿದ್ದಾರೆ. ಗ್ರಾಮಸ್ಥರು, ವಿದ್ಯಾರ್ಥಿನಿಯರು, ಮಹಿಳೆಯರಿಗೆ ಓಡಾಡಲು ಸಮಸ್ಯೆ ಆಗುತ್ತಿದ್ದು ಈ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಮಾಡು ವರೆಗೂ ಬಂದ್ ಹಿಂಪಡೆಯಲ್ಲವೆಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಸದ್ಯ ಜನರು ಹೆದ್ದಾರಿಯಲ್ಲಿಯೇ ಶಾಮಿಯಾನ ಹಾಕಿ ಧರಣಿ‌ ಕುಳಿತಿದ್ದು ಗ್ರಾಮಸ್ಥರಿಗೆ ರೈತ ಸಂಘವೂ ಸಾಥ್ ನೀಡಿದೆ. ಇದರಿಂದಾಗಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ವಾಹನಗಳು ನಿಂತಿವೆ. ಪ್ರತಿಭಟನಾಕಾರರಿಂದಾಗಿ ಬೇಸತ್ತ ಪ್ರಯಾಣಿಕರು ಅವರೊಂದಿಗೆ ವಾಗ್ವಾದ ಮಾಡಿದ್ದಾರೆ. ಪ್ರತಿಭಟನಾಕಾರರ ಜತೆ ಮಹಿಳೆಯೊಬ್ಬರು ವಾಗ್ವಾದಕ್ಕೆ ಇಳಿದಿದ್ದು ರಸ್ತೆಯಲ್ಲಿ ಹೋಗಲು ಬಿಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ಆಕೆಯ ಮನವೊಲಿಸಲು ಪ್ರತಿಭಾಟನಾಕಾರರು ‘ದಯವಿಟ್ಟು ಅರ್ಥ ಮಾಡಿಕೊಳ್ಳಿ, ಜನರ ಅನುಕೂಲಕ್ಕಾಗಿ ಈ ಪ್ರತಿಭಟನೆ’ ಎಂದಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ‘ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಡಿಸೆಂಬರ್‌ನಲ್ಲೇ ಮನವಿ ಸಲ್ಲಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಕೆಲಸ ಆರಂಭಿಸಲಾಗುವುದು’ ಎಂದಿದ್ದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರುವ ಪತ್ರವನ್ನು ಎಂಜಿನಿಯರ್ ತೋರಿಸಿದ್ದಾರೆ. ಎಂಜಿನಿಯರ್ ತಂದಿದ್ದ ಪತ್ರವನ್ನು ಹರಿದ ಪ್ರತಿಭಟನಾಕಾರರು ‘ಹಲವು ತಿಂಗಳಿನಿಂದಲೂ ಇದೇ ಕಾರಣ‌ ಕೊಡುತ್ತಾ ಬಂದಿದ್ದೀರಿ. ಈಗಲೂ ಹಳೆ ಲೆಟರ್ ಹಿಡಿದು ಬಂದಿದ್ದೀರಿ, ಈ ಪತ್ರಕ್ಕೆ ಯಾವುದೇ ಮಹತ್ವ ಇಲ್ಲ. ತತಕ್ಷಣ ಅಂಡರ್ ಪಾಸ್ ನಿರ್ಮಾಣ ಆರಂಭಿಸಿ. ನಿಮಗೆ ಯಾವುದೇ ಕಿರೀಟ ಹಾಕಿಲ್ಲ, ನೀವು ಜನಸೇವಕರು. ಅಹಂಕಾರ ಬಿಟ್ಟು ಕೆಲಸ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಎಂಜಿನಿಯರ್​ಗೆ ತಾಕೀತು ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

3 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

3 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

3 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

3 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

3 hours ago