Latest

ಧಾರವಾಡ ಜಿಲ್ಲಾ ಉಪ ವಿಭಾಗಾಧಿಕಾರಿ ಕಾರು ಜಪ್ತಿ.

ಧಾರವಾಡ : ಭೂ ಸ್ವಾಧೀನಕ್ಕೊಳಪಟ್ಟ ರೈತನಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಧಾರವಾಡ ಉಪ ವಿಭಾಗಧಿಕಾರಿಗಳ ಕಾರನ್ನು ಮಾನ್ಯ ನ್ಯಾಯಾಲಯದ ಸೂಚನೆ ಮೇರೆಗೆ ಜಪ್ತಿ ಮಾಡಲಾಗಿದೆ. ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹುಲಿಕೇರಿ ಗ್ರಾಮದ ಇಂದಿರೆಮ್ಮನ ಕೆರೆಯಲ್ಲಿ ಮುಳಗಡೆ ಯಾಗಿರುವ ಜಮಿನಿನ ವಿಷಯವಾಗಿ ವೀರಣ್ಣ ನಾಗಶೇಟ್ಟಿ ಎಂಬುವರಿಗೆ ನೀರಾವರಿ ಇಲಾಖೆಯು ಉಪವಿಭಾಗಧಿಕಾರಿಗಳ ಸೂಚನೆ ಮೆರೆಗೆ 2015. ರಲ್ಲಿ ಹದಿಮೂರು ಗುಂಟೆ (13) ಜಮೀನನ್ನು ಸ್ವಾಧೀನಪಡಿಸಿಕೊಂಡಿತು. ಈ ಜಮಿನಿಗೆ ಸಂಬಂಧಿಸಿದಂತೆ ನೀರಾವರಿ ಇಲಾಖೆ ರೈತನಿಗೆ ಕೇವಲ ಆರು ಲಕ್ಷರೂಪಾಯಿ .(6.00.000)₹ ಮಾತ್ರ ನೀಡಿತ್ತು ಬಾಕಿ ಉಳಿದ 14.00.000(ಹದಿನಾಲ್ಕು ಲಕ್ಷ) ರೂಪಾಯಿ .ಪರಿಹಾರ ನೀಡಲು ವಿಳಂಬವಾಗಿರುವುದರಿಂದ ರೈತ ಮಾನ್ಯ ನ್ಯಾಯಾಲಯದ ಮೆಟ್ಟಿಲೇರಿದ ಸ್ವಾದಿನಕ್ಕೊಳಪಟ್ಟ ರೈತನಿಗೆ ಇಪ್ಪತ್ತು ಲಕ್ಷ ರೂ.ಪರಿಹಾರ ನಿಡಬೆಕೆಂದು ತಿರ್ಮಾನವಾಗಿತ್ತು.

ಬಾಕಿ ಉಳಿದ ಪರಿಹಾರ ನೀಡಲು ವಿಳಂಬವಾಗಿರುವುದರಿಂದ ಧಾರವಾಡದ ಎರಡನೆಯ ಹೇಚ್ಚುವರಿ ದಿವಾಣಿ ನ್ಯಾಯಾಲಯವು ಉಪವಿಭಾಗ ಅಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಸೂಚನೆ ನಿಡಿತು. ನ್ಯಾಯಾಲಯದ ಆದೇಶದ ಮೇರೆಗೆ ಶನಿವಾರ ಉಪವಿಭಾಗ ಅಧಿಕಾರಿಗಳ ಕಾರನ್ನು ಜಪ್ತಿ ಮಾಡಲಾಗಿದೆ . ಇದೆನು …? ಹೊಸದೆನಲ್ಲ ಇವರಿಗೆ ಇದೆ ತರಹ ಕಳೆದ ವರ್ಷ ಕೂಡಾ ನವಲಗುಂದದ ನಿಲವ್ವಾ ಲಲಿತಾ ಕೇರಿ ಎಂಬ ರೈತ ಮಹಿಳೆಯ ಭೂ ಸ್ವಾದಿನಪಡಿಸಕೊಂಡ ವಿಷಯದಲ್ಲೂ ಹೀಗೆ ಕಾರು ಜಪ್ತಿ ಯಾಗಿದ್ದು ಕಾಣಬಹುದು.. ಎನೆಯಾಗಲಿ ಜಮಿನು ಕಳೆದುಕೊಂಡು ಸರಕಾರ ನಿಡುವ ಪರಿಹಾರದತ್ತ ರೈತ ಮುಖಮಾಡಿ ನೋಡುವಾಗ ನಿರಾಸೆ ಅಗಬಾರದು.. ಎನ್ನುವುದೇ…! ನಮ್ಮ ಉದ್ದೇಶ.
ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಾಗಿ ಭೂಸ್ವಾಧೀನ ; ನೀರಾವರಿ ಇಲಾಖೆ ಬಾಕಿ ಮೊತ್ತ ನೀಡದ್ದರಿಂದ ಭೂಸ್ವಾಧೀನ ಅಧಿಕಾರಿ ಎ.ಸಿ. ವಾಹನ ಜಪ್ತಿ; ಮಾ.06 ರಂದು ನ್ಯಾಯಾಲಯಕ್ಕೆ ಬಾಕಿ ಮೊತ್ತ ಜಮೆ
ಧಾರವಾಡ : ಧಾರವಾಡ ತಾಲೂಕ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆ ಎಡದಂಡೆ ಕಾಲುವೆ ನಂ. 02 ನೇದ್ದರ ನಿರ್ಮಾಣದ ಕುರಿತಂತೆ ಧಾರವಾಡ ತಾಲೂಕ ಹೂಲಿಕೇರಿ ಗ್ರಾಮದ ರಿಸನಂ. 108/2 ಕ್ಷೇತ್ರ : 00ಎ-13 ಗುಂಟೆ ಜಮೀನನ್ನು ಭೂ ಮಾಲಿಕರಾದ ವೀರಣ್ಣ ತಂದೆ ಶೀದ್ಲಿಂಗಪ್ಪ ನಾಗಶೆಟ್ಟಿ ಸಾ|| ಹೂಲಿಕೇರಿ ತಾ|| ಅಳ್ನಾವರ ಇವರ ಹೆಸರಿನಲ್ಲಿ ಸದರಿ ಜಮೀನಿಗೆ ರೂ. 14,184/-ಗಳನ್ನು ನಿಗಧಿಪಡಿಸಿ ತೀರ್ಪು ಘೋಷಣೆ ಮಾಡಿ ಭೂ-ಸ್ವಾಧೀನ ಪಡಿಸಿಕೊಂಡಿದ್ದು ಇರುತ್ತದೆ.
ಸದರಿ ಜಮೀನಿನ ಭೂ ಮಾಲಿಕರು ಹೆಚ್ಚುವರಿ ಪರಿಹಾರ ಕೋರಿ ಭೂ ಸ್ವಾಧೀನ ಕಾಯ್ದೆ 1894 ರ ಕಲಂ 18 (1) ರಡಿ ಈ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದಲ್ಲಿ ದಾಖಲಾದ ಎಲ್.ಎ.ಸಿ ನಂ. 26/2013 ನೇದ್ದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಿವಾಣಿ ನ್ಯಾಯಾಲಯ ಧಾರವಾಡ ರವರು ಸದರಿ ಜಮೀನಿಗೆ ಪ್ರತಿ ಗುಂಟೆಗೆ ರೂ: 31,500/-ಗಳನ್ನು ನಿಗಧಿಪಡಿಸಿ ಆದೇಶಿಸಿದ್ದು ಇರುತ್ತದೆ.
ಮಾನ್ಯ ನ್ಯಾಯಾಲಯದ ಆದೇಶದನ್ವಯ ಸದರಿ ಪ್ರಕರಣಗಳಲ್ಲಿ ಒಟ್ಟು ರೂ: 20,42,792/- ಗಳನ್ನು ಮಾನ್ಯ ನ್ಯಾಯಾಲಯಕ್ಕೆ ಭರಣಾ ಮಾಡಬೇಕಾಗಿದ್ದು, ಈ ಕುರಿತಂತೆ ಭೂ ಕೋರಿಕೆ ಸಂಸ್ಥೆಯವರಾದ ಕಾರ್ಯನಿರ್ವಾಹಕ ಇಂಜನೀಯರರು, ಸಣ್ಣ ನೀರಾವರಿ ಇಲಾಖೆ ಧಾರವಾಡ ಇವರು ರೂ: 17,85,308/-ಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಣವನ್ನು ಈಗಾಗಲೇ ಭರಣಾ ಮಾಡಿದ್ದು ಬಾಕಿ ಮೊತ್ತ ರೂ: 2,57,484/-ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ಹಣವನ್ನು ಭರಣಾ ಮಾಡದ ಕಾರಣ ಸರ್ಕಾರದ ಹಂತದಲ್ಲಿ ಭೂಸ್ವಾಧೀನ ಅಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿಯಾಗಿರುತ್ತದೆ ಎಂದು ಎ.ಸಿ. ಅವರು ತಿಳಿಸಿದ್ದಾರೆ.
ಈಗಾಗಲೇ ದಿನಾಂಕ: 03-03-2023 (ಶುಕ್ರವಾರ) ರಂದು ಸಣ್ಣ ನೀರಾವರಿ ಇಲಾಖೆಗೆ ಸರ್ಕಾರದಿಂದ ರೈತರಿಗೆ ನೀಡಬೇಕಾಗಿರುವ ಬಾಕಿ ಮೊತ್ತ ಬಿಡುಗಡೆಯಾಗಿದ್ದು, ಸೋಮವಾರ ದಿನಾಂಕ: 06-03-2023 ರಂದು ನ್ಯಾಯಾಲಯಕ್ಕೆ ಜಮೆ ಮಾಡುವುದಾಗಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಚರಂತಯ್ಯ ಹಿರೇಮಠ

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

7 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

21 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

23 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago