Latest

ಧಾರವಾಡ ಜಿಲ್ಲಾ ಉಪ ವಿಭಾಗಾಧಿಕಾರಿ ಕಾರು ಜಪ್ತಿ.

ಧಾರವಾಡ : ಭೂ ಸ್ವಾಧೀನಕ್ಕೊಳಪಟ್ಟ ರೈತನಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಧಾರವಾಡ ಉಪ ವಿಭಾಗಧಿಕಾರಿಗಳ ಕಾರನ್ನು ಮಾನ್ಯ ನ್ಯಾಯಾಲಯದ ಸೂಚನೆ ಮೇರೆಗೆ ಜಪ್ತಿ ಮಾಡಲಾಗಿದೆ. ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹುಲಿಕೇರಿ ಗ್ರಾಮದ ಇಂದಿರೆಮ್ಮನ ಕೆರೆಯಲ್ಲಿ ಮುಳಗಡೆ ಯಾಗಿರುವ ಜಮಿನಿನ ವಿಷಯವಾಗಿ ವೀರಣ್ಣ ನಾಗಶೇಟ್ಟಿ ಎಂಬುವರಿಗೆ ನೀರಾವರಿ ಇಲಾಖೆಯು ಉಪವಿಭಾಗಧಿಕಾರಿಗಳ ಸೂಚನೆ ಮೆರೆಗೆ 2015. ರಲ್ಲಿ ಹದಿಮೂರು ಗುಂಟೆ (13) ಜಮೀನನ್ನು ಸ್ವಾಧೀನಪಡಿಸಿಕೊಂಡಿತು. ಈ ಜಮಿನಿಗೆ ಸಂಬಂಧಿಸಿದಂತೆ ನೀರಾವರಿ ಇಲಾಖೆ ರೈತನಿಗೆ ಕೇವಲ ಆರು ಲಕ್ಷರೂಪಾಯಿ .(6.00.000)₹ ಮಾತ್ರ ನೀಡಿತ್ತು ಬಾಕಿ ಉಳಿದ 14.00.000(ಹದಿನಾಲ್ಕು ಲಕ್ಷ) ರೂಪಾಯಿ .ಪರಿಹಾರ ನೀಡಲು ವಿಳಂಬವಾಗಿರುವುದರಿಂದ ರೈತ ಮಾನ್ಯ ನ್ಯಾಯಾಲಯದ ಮೆಟ್ಟಿಲೇರಿದ ಸ್ವಾದಿನಕ್ಕೊಳಪಟ್ಟ ರೈತನಿಗೆ ಇಪ್ಪತ್ತು ಲಕ್ಷ ರೂ.ಪರಿಹಾರ ನಿಡಬೆಕೆಂದು ತಿರ್ಮಾನವಾಗಿತ್ತು.

ಬಾಕಿ ಉಳಿದ ಪರಿಹಾರ ನೀಡಲು ವಿಳಂಬವಾಗಿರುವುದರಿಂದ ಧಾರವಾಡದ ಎರಡನೆಯ ಹೇಚ್ಚುವರಿ ದಿವಾಣಿ ನ್ಯಾಯಾಲಯವು ಉಪವಿಭಾಗ ಅಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಸೂಚನೆ ನಿಡಿತು. ನ್ಯಾಯಾಲಯದ ಆದೇಶದ ಮೇರೆಗೆ ಶನಿವಾರ ಉಪವಿಭಾಗ ಅಧಿಕಾರಿಗಳ ಕಾರನ್ನು ಜಪ್ತಿ ಮಾಡಲಾಗಿದೆ . ಇದೆನು …? ಹೊಸದೆನಲ್ಲ ಇವರಿಗೆ ಇದೆ ತರಹ ಕಳೆದ ವರ್ಷ ಕೂಡಾ ನವಲಗುಂದದ ನಿಲವ್ವಾ ಲಲಿತಾ ಕೇರಿ ಎಂಬ ರೈತ ಮಹಿಳೆಯ ಭೂ ಸ್ವಾದಿನಪಡಿಸಕೊಂಡ ವಿಷಯದಲ್ಲೂ ಹೀಗೆ ಕಾರು ಜಪ್ತಿ ಯಾಗಿದ್ದು ಕಾಣಬಹುದು.. ಎನೆಯಾಗಲಿ ಜಮಿನು ಕಳೆದುಕೊಂಡು ಸರಕಾರ ನಿಡುವ ಪರಿಹಾರದತ್ತ ರೈತ ಮುಖಮಾಡಿ ನೋಡುವಾಗ ನಿರಾಸೆ ಅಗಬಾರದು.. ಎನ್ನುವುದೇ…! ನಮ್ಮ ಉದ್ದೇಶ.
ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಾಗಿ ಭೂಸ್ವಾಧೀನ ; ನೀರಾವರಿ ಇಲಾಖೆ ಬಾಕಿ ಮೊತ್ತ ನೀಡದ್ದರಿಂದ ಭೂಸ್ವಾಧೀನ ಅಧಿಕಾರಿ ಎ.ಸಿ. ವಾಹನ ಜಪ್ತಿ; ಮಾ.06 ರಂದು ನ್ಯಾಯಾಲಯಕ್ಕೆ ಬಾಕಿ ಮೊತ್ತ ಜಮೆ
ಧಾರವಾಡ : ಧಾರವಾಡ ತಾಲೂಕ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆ ಎಡದಂಡೆ ಕಾಲುವೆ ನಂ. 02 ನೇದ್ದರ ನಿರ್ಮಾಣದ ಕುರಿತಂತೆ ಧಾರವಾಡ ತಾಲೂಕ ಹೂಲಿಕೇರಿ ಗ್ರಾಮದ ರಿಸನಂ. 108/2 ಕ್ಷೇತ್ರ : 00ಎ-13 ಗುಂಟೆ ಜಮೀನನ್ನು ಭೂ ಮಾಲಿಕರಾದ ವೀರಣ್ಣ ತಂದೆ ಶೀದ್ಲಿಂಗಪ್ಪ ನಾಗಶೆಟ್ಟಿ ಸಾ|| ಹೂಲಿಕೇರಿ ತಾ|| ಅಳ್ನಾವರ ಇವರ ಹೆಸರಿನಲ್ಲಿ ಸದರಿ ಜಮೀನಿಗೆ ರೂ. 14,184/-ಗಳನ್ನು ನಿಗಧಿಪಡಿಸಿ ತೀರ್ಪು ಘೋಷಣೆ ಮಾಡಿ ಭೂ-ಸ್ವಾಧೀನ ಪಡಿಸಿಕೊಂಡಿದ್ದು ಇರುತ್ತದೆ.
ಸದರಿ ಜಮೀನಿನ ಭೂ ಮಾಲಿಕರು ಹೆಚ್ಚುವರಿ ಪರಿಹಾರ ಕೋರಿ ಭೂ ಸ್ವಾಧೀನ ಕಾಯ್ದೆ 1894 ರ ಕಲಂ 18 (1) ರಡಿ ಈ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದಲ್ಲಿ ದಾಖಲಾದ ಎಲ್.ಎ.ಸಿ ನಂ. 26/2013 ನೇದ್ದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಿವಾಣಿ ನ್ಯಾಯಾಲಯ ಧಾರವಾಡ ರವರು ಸದರಿ ಜಮೀನಿಗೆ ಪ್ರತಿ ಗುಂಟೆಗೆ ರೂ: 31,500/-ಗಳನ್ನು ನಿಗಧಿಪಡಿಸಿ ಆದೇಶಿಸಿದ್ದು ಇರುತ್ತದೆ.
ಮಾನ್ಯ ನ್ಯಾಯಾಲಯದ ಆದೇಶದನ್ವಯ ಸದರಿ ಪ್ರಕರಣಗಳಲ್ಲಿ ಒಟ್ಟು ರೂ: 20,42,792/- ಗಳನ್ನು ಮಾನ್ಯ ನ್ಯಾಯಾಲಯಕ್ಕೆ ಭರಣಾ ಮಾಡಬೇಕಾಗಿದ್ದು, ಈ ಕುರಿತಂತೆ ಭೂ ಕೋರಿಕೆ ಸಂಸ್ಥೆಯವರಾದ ಕಾರ್ಯನಿರ್ವಾಹಕ ಇಂಜನೀಯರರು, ಸಣ್ಣ ನೀರಾವರಿ ಇಲಾಖೆ ಧಾರವಾಡ ಇವರು ರೂ: 17,85,308/-ಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಣವನ್ನು ಈಗಾಗಲೇ ಭರಣಾ ಮಾಡಿದ್ದು ಬಾಕಿ ಮೊತ್ತ ರೂ: 2,57,484/-ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ಹಣವನ್ನು ಭರಣಾ ಮಾಡದ ಕಾರಣ ಸರ್ಕಾರದ ಹಂತದಲ್ಲಿ ಭೂಸ್ವಾಧೀನ ಅಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿಯಾಗಿರುತ್ತದೆ ಎಂದು ಎ.ಸಿ. ಅವರು ತಿಳಿಸಿದ್ದಾರೆ.
ಈಗಾಗಲೇ ದಿನಾಂಕ: 03-03-2023 (ಶುಕ್ರವಾರ) ರಂದು ಸಣ್ಣ ನೀರಾವರಿ ಇಲಾಖೆಗೆ ಸರ್ಕಾರದಿಂದ ರೈತರಿಗೆ ನೀಡಬೇಕಾಗಿರುವ ಬಾಕಿ ಮೊತ್ತ ಬಿಡುಗಡೆಯಾಗಿದ್ದು, ಸೋಮವಾರ ದಿನಾಂಕ: 06-03-2023 ರಂದು ನ್ಯಾಯಾಲಯಕ್ಕೆ ಜಮೆ ಮಾಡುವುದಾಗಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಚರಂತಯ್ಯ ಹಿರೇಮಠ

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

14 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

14 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

15 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

18 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

23 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

23 hours ago