ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮಠ ಮತ್ತು ಎದ್ದೇಳು ಮಂಜುನಾಥ ಹಂತಹ ವಿಭಿನ್ನ ಸಿನಿಮಾಗಳನ್ನು ನೀಡಿದ್ದ ಹಿರಿಯ ನಿರ್ದೇಶಕ, ನಟ, ಬರಹಗಾರ ಮತ್ತು ನಿರ್ಮಾಪಕ ಗುರುಪ್ರಸಾದ್ (52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಬೆಂಗಳೂರಿನ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ದುರ್ಘಟನೆಗೆ ಸಂಬಂಧಿಸಿದಂತೆ ಒಂದು ಆಡಿಯೋ ಕ್ಲಿಪ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ಪತ್ನಿಯೊಂದಿಗೆ ಫೋನ್ ಕರೆ ವೇಳೆ ಆತ್ಮಹತ್ಯೆ ಕುರಿತ ಮಾತುಗಳನ್ನು ಆಡಿರುವುದು ಕೇಳಿ ಬರುತ್ತದೆ. ವರದಿ ಪ್ರಕಾರ, ಅವರು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭದಲ್ಲಿ, “ನಿನಗೂ ಮಗಳಿಗೆ ಒಂದು ದುಡ್ಡು ಮಾಡಿ ಸತ್ತು ಹೋಗಿಬಿಡುತ್ತೇನೆ” ಎಂದಿದ್ದರು. ಈ ವಾಕ್ಯವನ್ನು ಅವರು ಪದೇ ಪದೇ ಉಲ್ಲೇಖಿಸಿರುವುದು ಆಡಿಯೋದಲ್ಲಿ ಸ್ಪಷ್ಟವಾಗಿದೆ.
ಈ ಫೋನ್ ಸಂಭಾಷಣೆಯನ್ನು ಸ್ವತಃ ಗುರುಪ್ರಸಾದ್ ಅವರು ರೆಕಾರ್ಡ್ ಮಾಡಿ ಅವರ ಆಪ್ತರಿಗೆ ಕಳುಹಿಸಿದ್ದರೆಂಬ ಮಾಹಿತಿ ಹೊರಬಿದ್ದಿದೆ. ಅವರ ನಿಧನದ ನಂತರ ಈ ಆಡಿಯೋ ಲಭ್ಯವಾಗಿದ್ದು, ಅದೀಗ ವೈರಲ್ ಆಗಿದೆ.
ಆತ್ಮಹತ್ಯೆಯ ಹಿಂದಿನ ಕಾರಣ ಏನು?
ಗುರುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅವರ ವೈಯಕ್ತಿಕ ಜೀವನ ಮತ್ತು ಆರ್ಥಿಕ ಸಮಸ್ಯೆಗಳ ನಡುವಣ ಒತ್ತಡವೇ ಇದಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಪೋಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಕುಟುಂಬದ ಸದಸ್ಯರ ಹೇಳಿಕೆ, ಆಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳನ್ನೂ ಪರಿಶೀಲಿಸಲಾಗುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಗುರುಪ್ರಸಾದ್ ಅವರು ವಿಭಿನ್ನ ಶೈಲಿಯ ಸಿನಿಮಾಗಳನ್ನು ನೀಡಿದ ವ್ಯಕ್ತಿಯಾಗಿದ್ದರು. ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…