Latest

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣ: ಪತ್ನಿಯೊಡನೆ ಕೊನೆಯ ಮಾತಿನ ಆಡಿಯೋ ವೈರಲ್!

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮಠ ಮತ್ತು ಎದ್ದೇಳು ಮಂಜುನಾಥ ಹಂತಹ ವಿಭಿನ್ನ ಸಿನಿಮಾಗಳನ್ನು ನೀಡಿದ್ದ ಹಿರಿಯ ನಿರ್ದೇಶಕ, ನಟ, ಬರಹಗಾರ ಮತ್ತು ನಿರ್ಮಾಪಕ ಗುರುಪ್ರಸಾದ್ (52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಬೆಂಗಳೂರಿನ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಒಂದು ಆಡಿಯೋ ಕ್ಲಿಪ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ಪತ್ನಿಯೊಂದಿಗೆ ಫೋನ್ ಕರೆ ವೇಳೆ ಆತ್ಮಹತ್ಯೆ ಕುರಿತ ಮಾತುಗಳನ್ನು ಆಡಿರುವುದು ಕೇಳಿ ಬರುತ್ತದೆ. ವರದಿ ಪ್ರಕಾರ, ಅವರು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭದಲ್ಲಿ, “ನಿನಗೂ ಮಗಳಿಗೆ ಒಂದು ದುಡ್ಡು ಮಾಡಿ ಸತ್ತು ಹೋಗಿಬಿಡುತ್ತೇನೆ” ಎಂದಿದ್ದರು. ಈ ವಾಕ್ಯವನ್ನು ಅವರು ಪದೇ ಪದೇ ಉಲ್ಲೇಖಿಸಿರುವುದು ಆಡಿಯೋದಲ್ಲಿ ಸ್ಪಷ್ಟವಾಗಿದೆ.

ಈ ಫೋನ್ ಸಂಭಾಷಣೆಯನ್ನು ಸ್ವತಃ ಗುರುಪ್ರಸಾದ್‌ ಅವರು ರೆಕಾರ್ಡ್ ಮಾಡಿ ಅವರ ಆಪ್ತರಿಗೆ ಕಳುಹಿಸಿದ್ದರೆಂಬ ಮಾಹಿತಿ ಹೊರಬಿದ್ದಿದೆ. ಅವರ ನಿಧನದ ನಂತರ ಈ ಆಡಿಯೋ ಲಭ್ಯವಾಗಿದ್ದು, ಅದೀಗ ವೈರಲ್ ಆಗಿದೆ.

ಆತ್ಮಹತ್ಯೆಯ ಹಿಂದಿನ ಕಾರಣ ಏನು?

ಗುರುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅವರ ವೈಯಕ್ತಿಕ ಜೀವನ ಮತ್ತು ಆರ್ಥಿಕ ಸಮಸ್ಯೆಗಳ ನಡುವಣ ಒತ್ತಡವೇ ಇದಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪೋಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಕುಟುಂಬದ ಸದಸ್ಯರ ಹೇಳಿಕೆ, ಆಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳನ್ನೂ ಪರಿಶೀಲಿಸಲಾಗುತ್ತಿದೆ.

ಕನ್ನಡ ಚಿತ್ರರಂಗದಲ್ಲಿ ಗುರುಪ್ರಸಾದ್ ಅವರು ವಿಭಿನ್ನ ಶೈಲಿಯ ಸಿನಿಮಾಗಳನ್ನು ನೀಡಿದ ವ್ಯಕ್ತಿಯಾಗಿದ್ದರು. ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

9 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

9 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

9 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

9 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

10 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

10 hours ago