Latest

ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ; ದೂರು ನೀಡಿದ ನಿರ್ದೇಶಕನ ಪತ್ನಿ.

ಚೆನ್ನೈನ ಐಯ್ಯಪ್ಪಂತಂಗಲ್‌ನಲ್ಲಿರುವ ಐಷಾರಾಮಿ ಅಪಾರ್ಟ್‌ಮೆಂಟ್ ಸಂಕೀರ್ಣವೊಂದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ರಾಜು ಮುರುಗನ್ ಅವರ ಪತ್ನಿ ಹೇಮಾ ಸಿನ್ಹಾ, ಈ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಹೇಮಾ ಅವರ ಪ್ರಕಾರ, ಈ ಅಕ್ರಮ ಚಟುವಟಿಕೆಗಳ ವಿರುದ್ಧ ಮಾತನಾಡಿದ ಕಾರಣಕ್ಕೆ, ಅವರಿಗೆ ಮತ್ತು ಅವರ ಕುಟುಂಬಕ್ಕೆ ನಿರಂತರ ಕಿರುಕುಳ ನೀಡಲಾಗುತ್ತಿದೆ. ಅಪಾರ್ಟ್‌ಮೆಂಟ್‌ನ ನಿವಾಸಿಗಳ ಸಂಘಕ್ಕೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಬದಲಿಗೆ, ಅವರನ್ನು ಕಿರಿಕಿರಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ತಾವು ಪ್ರತೀ ಮೂರು ತಿಂಗಳಿಗೊಮ್ಮೆ ₹22,000 ನಿರ್ವಹಣಾ ಶುಲ್ಕ ಪಾವತಿಸುತ್ತಿದ್ದರೂ, ಮೂಲಭೂತ ಸೌಲಭ್ಯಗಳು, ವಿಶೇಷವಾಗಿ ಕಸ ವಿಲೇವಾರಿ ಮತ್ತು ಈಜುಕೊಳದ ಬಳಕೆಯನ್ನು ನಿರಾಕರಿಸಲಾಗಿದೆ. ಅಲ್ಲದೆ, ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಹೇಮಾ ಸಿನ್ಹಾ ಹೇಳಿದ್ದಾರೆ.

ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ನಾಲ್ಕು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ರಾಜು ಮುರುಗನ್, ತಮಿಳು ಚಿತ್ರರಂಗದಲ್ಲಿ ‘ಕೂಕೂ’, ‘ಜೋಕರ್’, ‘ಮೆಹಂದಿ ಸರ್ಕಸ್’, ‘ಮಾಡರ್ನ್ ಲವ್ ಚೆನ್ನೈ’ ಮತ್ತು ‘ಜಪಾನ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಸದ್ಯ ಅವರು ಸಸಿಕುಮಾರ್ ನಟನೆಯ ‘ಮೈ ಲಾರ್ಡ್’ ಚಿತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಕುರಿತು ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತನಿಖೆಯ ನಂತರ ಈ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

3 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

7 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

8 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

8 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

18 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

18 hours ago