Crime

ದಿವ್ಯಾಂಗ ಮಹಿಳೆ ಮೇಲೆ ಬೈಕ್ ಸವಾರರ ಸಾಮೂಹಿಕ ಅತ್ಯಾಚಾರ – ಸಿಸಿಟಿವಿಯಲ್ಲಿ ಭೀಕರ ದೃಶ್ಯ

ಉತ್ತರ ಪ್ರದೇಶದ ಬಲರಾಂಪುರದಲ್ಲಿ ದಿವ್ಯಾಂಗ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಈ ಘಟನೆ ಜಿಲ್ಲೆಯ ಪ್ರಮುಖ ಪೊಲೀಸ್ ಮತ್ತು ಆಡಳಿತಾಧಿಕಾರಿಗಳ ವಸತಿ ಪ್ರದೇಶದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ನಡೆದಿದೆ.

ಸೋಮವಾರ ಸಂಜೆ, ಮಹಿಳೆ ತನ್ನ ಚಿಕ್ಕಪ್ಪನ ಮನೆಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ, ಮೂರರಿಂದ ನಾಲ್ಕು ಬೈಕ್‌ಗಳಲ್ಲಿ ಬಂದ ಅಪರಿಚಿತರು ಅವಳನ್ನು ಹಿಂಬಾಲಿಸಿದರು. ಘಟನೆಯ ಕೆಲವು ಕ್ಷಣಗಳ ದೃಶ್ಯ ಪೊಲೀಸ್ ಅಧಿಕಾರಿಗಳ ವಸತಿ ಪ್ರದೇಶದ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದು, ಮಹಿಳೆ ನಿರ್ಜನ ರಸ್ತೆಯಲ್ಲಿ ಓಡುತ್ತಾ ಹಿಂದುಮುಗಿದು ನೋಡುತ್ತಿರುವ ಭೀತಿದಾಯಕ ಕ್ಷಣಗಳನ್ನು ದಾಖಲಿಸಿದೆ.

ಕುಟುಂಬದವರು ಹೇಳುವ ಪ್ರಕಾರ, ಆಕೆಯನ್ನು ತಡೆದು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಬೈಕ್ ಸವಾರರು ಸಾಮೂಹಿಕ ಅತ್ಯಾಚಾರ ಎಸಗಿದರು. ಮನೆಗೆ ಹಿಂತಿರುಗದ ಕಾರಣ ಕುಟುಂಬಸ್ಥರು ಹುಡುಕಾಟ ಆರಂಭಿಸಿ, ಕೊನೆಗೆ ಪೊಲೀಸ್ ಠಾಣೆಯ ಹತ್ತಿರದ ಪೊದೆಗಳಲ್ಲಿ ಆಕೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಹಚ್ಚಿದರು. ಆ ಸಮಯದಲ್ಲಿ ಆಕೆಯ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.

ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಪ್ರಜ್ಞೆ ಬಂದ ನಂತರ ತನ್ನ ಮೇಲೆ ಬೈಕ್‌ನಲ್ಲಿದ್ದವರು ಅತ್ಯಾಚಾರ ಎಸಗಿದ ಬಗ್ಗೆ ಹೇಳಿಕೆ ನೀಡಿದ್ದಾಳೆ. ವೈದ್ಯಕೀಯ ಪರೀಕ್ಷೆಯಲ್ಲೂ ಅತ್ಯಾಚಾರದ ಸಂಗತಿ ದೃಢಪಟ್ಟಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ, ಎಸ್‌ಪಿ, ನ್ಯಾಯಮೂರ್ತಿಗಳು ಸೇರಿದಂತೆ ಉನ್ನತ ಅಧಿಕಾರಿಗಳ ವಸತಿ ಪ್ರದೇಶದ ಸಮೀಪದಲ್ಲಿ ಈ ಘಟನೆ ನಡೆದಿರುವುದರಿಂದ, ಭದ್ರತೆ ಕುರಿತ ಪ್ರಶ್ನೆಗಳು ಎದ್ದಿವೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago