ಉತ್ತರ ಪ್ರದೇಶದ ಬಲರಾಂಪುರದಲ್ಲಿ ದಿವ್ಯಾಂಗ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಈ ಘಟನೆ ಜಿಲ್ಲೆಯ ಪ್ರಮುಖ ಪೊಲೀಸ್ ಮತ್ತು ಆಡಳಿತಾಧಿಕಾರಿಗಳ ವಸತಿ ಪ್ರದೇಶದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ನಡೆದಿದೆ.
ಸೋಮವಾರ ಸಂಜೆ, ಮಹಿಳೆ ತನ್ನ ಚಿಕ್ಕಪ್ಪನ ಮನೆಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ, ಮೂರರಿಂದ ನಾಲ್ಕು ಬೈಕ್ಗಳಲ್ಲಿ ಬಂದ ಅಪರಿಚಿತರು ಅವಳನ್ನು ಹಿಂಬಾಲಿಸಿದರು. ಘಟನೆಯ ಕೆಲವು ಕ್ಷಣಗಳ ದೃಶ್ಯ ಪೊಲೀಸ್ ಅಧಿಕಾರಿಗಳ ವಸತಿ ಪ್ರದೇಶದ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದು, ಮಹಿಳೆ ನಿರ್ಜನ ರಸ್ತೆಯಲ್ಲಿ ಓಡುತ್ತಾ ಹಿಂದುಮುಗಿದು ನೋಡುತ್ತಿರುವ ಭೀತಿದಾಯಕ ಕ್ಷಣಗಳನ್ನು ದಾಖಲಿಸಿದೆ.
ಕುಟುಂಬದವರು ಹೇಳುವ ಪ್ರಕಾರ, ಆಕೆಯನ್ನು ತಡೆದು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಬೈಕ್ ಸವಾರರು ಸಾಮೂಹಿಕ ಅತ್ಯಾಚಾರ ಎಸಗಿದರು. ಮನೆಗೆ ಹಿಂತಿರುಗದ ಕಾರಣ ಕುಟುಂಬಸ್ಥರು ಹುಡುಕಾಟ ಆರಂಭಿಸಿ, ಕೊನೆಗೆ ಪೊಲೀಸ್ ಠಾಣೆಯ ಹತ್ತಿರದ ಪೊದೆಗಳಲ್ಲಿ ಆಕೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಹಚ್ಚಿದರು. ಆ ಸಮಯದಲ್ಲಿ ಆಕೆಯ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.
ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಪ್ರಜ್ಞೆ ಬಂದ ನಂತರ ತನ್ನ ಮೇಲೆ ಬೈಕ್ನಲ್ಲಿದ್ದವರು ಅತ್ಯಾಚಾರ ಎಸಗಿದ ಬಗ್ಗೆ ಹೇಳಿಕೆ ನೀಡಿದ್ದಾಳೆ. ವೈದ್ಯಕೀಯ ಪರೀಕ್ಷೆಯಲ್ಲೂ ಅತ್ಯಾಚಾರದ ಸಂಗತಿ ದೃಢಪಟ್ಟಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ, ಎಸ್ಪಿ, ನ್ಯಾಯಮೂರ್ತಿಗಳು ಸೇರಿದಂತೆ ಉನ್ನತ ಅಧಿಕಾರಿಗಳ ವಸತಿ ಪ್ರದೇಶದ ಸಮೀಪದಲ್ಲಿ ಈ ಘಟನೆ ನಡೆದಿರುವುದರಿಂದ, ಭದ್ರತೆ ಕುರಿತ ಪ್ರಶ್ನೆಗಳು ಎದ್ದಿವೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…