Politics

ಹೂಡಿಕೆದಾರರಿಗೆ ನಿರಾಸೆ; ಬಜೆಟ್ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆ ಕುಸಿತ.

3.0 ಸರ್ಕಾರದ ಮೊದಲ ಬಜೆಟ್ ಮಂಡನೆ. ಉದ್ಯೋಗ ಸೃಷ್ಟಿ, ತೆರಿಗೆ ಕಡಿತ, ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ, ಕೃಷಿ ಜೊತೆಗೆ ಕೆಲ ಹೊಸ ಯೋಜನೆಗಳ ಘೋಷಣೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭ ಮೇಲಿನ ತೆರಿಗೆಯಿಂದ ಹೂಡಿಕೆದಾರರು ನಿರಾಸೆಗೊಂಡಿದ್ದಾರೆ.
ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭದ ಮೇಲೆ ತೆರಿಗೆಯನ್ನು ಏರಿಕೆ ಮಾಡಲಾಗಿದೆ. ಶೇಕಡಾ 10 ರಿಂದ ಶೇಕಡಾ 12ಕ್ಕೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಂಡವಾಳ ಹೂಡಿಕೆಯ ಲಾಭದ ತೆರಿಗೆ ಹೆಚ್ಚಳದಿಂದ ಹೂಡಿಕೆದಾರರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಷೇರುಮಾರುಕಟ್ಟೆ ಕುಸಿತ ಕಂಡಿದೆ. ಸೆನ್ಸೆಕ್ಸ್ 1,200 ಅಂಕ ಕುಸಿತ ಕಂಡರೆ, ನಿಫ್ಠಿ 350 ಅಂಕ ಕುಸಿತ ಕಂಡಿದೆ.
ಒಂದೆಡೆ ಭಾರತದಲ್ಲಿ ಬಜೆಟ್ ಮಂಡನೆಯಲ್ಲಿ ಹೂಡಿಕೆ ಲಾಭದ ಮೇಲಿನ ತೆರಿಗೆ ಹೆಚ್ಚಳದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡರೆ, ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕುಸಿತ ಕಂಡಿದೆ. ಪ್ರಮುಖವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಸ್ಥಾನದಿಂದ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ತಲ್ಲಣವಾಗಿದೆ. ಬಜೆಟ್ ಮಂಡನೆ ಬೆನ್ನಲ್ಲೇ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಈ ಬಾರಿ ಮೈತ್ರಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ ಕಳೆದೆರಡು ಅವಧಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್ ಮೋದಿ ಸರ್ಕಾರಕ್ಕೆ ಹೆಚ್ಚು ಸವಾಲಾಗಿತ್ತು. ಬೆಂಬಲ ನೀಡಿದ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

11 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

12 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

12 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

14 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

15 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

18 hours ago