3.0 ಸರ್ಕಾರದ ಮೊದಲ ಬಜೆಟ್ ಮಂಡನೆ. ಉದ್ಯೋಗ ಸೃಷ್ಟಿ, ತೆರಿಗೆ ಕಡಿತ, ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ, ಕೃಷಿ ಜೊತೆಗೆ ಕೆಲ ಹೊಸ ಯೋಜನೆಗಳ ಘೋಷಣೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭ ಮೇಲಿನ ತೆರಿಗೆಯಿಂದ ಹೂಡಿಕೆದಾರರು ನಿರಾಸೆಗೊಂಡಿದ್ದಾರೆ.
ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭದ ಮೇಲೆ ತೆರಿಗೆಯನ್ನು ಏರಿಕೆ ಮಾಡಲಾಗಿದೆ. ಶೇಕಡಾ 10 ರಿಂದ ಶೇಕಡಾ 12ಕ್ಕೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಂಡವಾಳ ಹೂಡಿಕೆಯ ಲಾಭದ ತೆರಿಗೆ ಹೆಚ್ಚಳದಿಂದ ಹೂಡಿಕೆದಾರರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಷೇರುಮಾರುಕಟ್ಟೆ ಕುಸಿತ ಕಂಡಿದೆ. ಸೆನ್ಸೆಕ್ಸ್ 1,200 ಅಂಕ ಕುಸಿತ ಕಂಡರೆ, ನಿಫ್ಠಿ 350 ಅಂಕ ಕುಸಿತ ಕಂಡಿದೆ.
ಒಂದೆಡೆ ಭಾರತದಲ್ಲಿ ಬಜೆಟ್ ಮಂಡನೆಯಲ್ಲಿ ಹೂಡಿಕೆ ಲಾಭದ ಮೇಲಿನ ತೆರಿಗೆ ಹೆಚ್ಚಳದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡರೆ, ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕುಸಿತ ಕಂಡಿದೆ. ಪ್ರಮುಖವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಸ್ಥಾನದಿಂದ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ತಲ್ಲಣವಾಗಿದೆ. ಬಜೆಟ್ ಮಂಡನೆ ಬೆನ್ನಲ್ಲೇ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಈ ಬಾರಿ ಮೈತ್ರಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ ಕಳೆದೆರಡು ಅವಧಿಯ ಬಜೆಟ್ಗಿಂತ ಈ ಬಾರಿಯ ಬಜೆಟ್ ಮೋದಿ ಸರ್ಕಾರಕ್ಕೆ ಹೆಚ್ಚು ಸವಾಲಾಗಿತ್ತು. ಬೆಂಬಲ ನೀಡಿದ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…