Latest

ನಗರಸಭಾ ಆಡಳಿತಕ್ಕೆ ಮುಖಭಂಗ, ಖಾಲಿ ಕುರ್ಚಿಗಳ ಪ್ರದರ್ಶನ

ನಂಜನಗೂಡು: ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ .ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ
ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆಯಾಗಿತ್ತು .
ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ .ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೋ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ
ಪೂರ್ವಾಬಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್,ಸಿದ್ದಿಕ್ಅಹ್ಮದ್,ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ವರದಿ: ಮೋಹನ್

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

4 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

24 hours ago